ರಾಜ್ಯ

ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನ ಪರಿಷತ್​ನಲ್ಲಿ ಸೋಲು: ಸರ್ಕಾರಕ್ಕೆ ಮುಖಭಂಗ; ಜೈ ಶ್ರೀರಾಮ ಎಂದ ಬಿಜೆಪಿ

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ.

ಬೆಂಗಳೂರು: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ಪ್ರತಿಪಕ್ಷ ಬಿಜೆಪಿ ಜೈ ಶ್ರೀರಾಮ ಘೋಷಣೆ ಕೂಗಿ ಸಂಭ್ರಮಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಇಂದು ಪರಿಷತ್ ನಲ್ಲಿ ಮಂಡಿಸಿದರು.

ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, 2003ರಿಂದ ವಿಧೇಯಕ ಜಾರಿಯಲ್ಲಿದೆ. 2003ರ ಮೇ 1 ರಿಂದ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಈಗಿರುವ ನಿಯಮದಂತೆ ಸರ್ಕಾರಕ್ಕೆ 8 ಕೋಟಿ ರೂ. ಸಲ್ಲಿಕೆ ಆಗುತ್ತಿದೆ ಎಂದರು. ಈಗಿನ‌ ಸಾಮಾನ್ಯ ಸಂಗ್ರಹಣ ನಿಧಿಯಿಂದ ಧಾರ್ಮಿಕ ಕೆಲಸ ಮಾಡಲಾಗಲ್ಲ. ಹೊಸ ನಿಯಮದಿಂದ 60 ಕೋಟಿ ರೂಪಾಯಿ ಹಣ ಸಂಗ್ರಹ ಆಗುತ್ತದೆ. ಸಿ ದರ್ಜೆಯ ದೇಗುಲಗಳನ್ನು ನಿರ್ವಹಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು.

ವಿಧೇಯಕದಲ್ಲಿದ್ದ ತಿದ್ದುಪಡಿ ಅಂಶಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ಮತ್ತು ವಿರೋಧವನ್ನು ವ್ಯಕ್ತಪಡಿಸಿದರು. ಒಂದು ಕೋಟಿಗಿಂತಲೂ ಹೆಚ್ಚು ಆದಾಯ ಇರುವ ದೇವಸ್ಥಾನಗಳ ಒಟ್ಟು ಆದಾಯದಿಂದ ಶೇಕಡ 10% ರಷ್ಟು ನಿಧಿ ಸಂಗ್ರಹಣೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ಪರ-ವಿರೋಧದ ಚರ್ಚೆಯ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ತಿದ್ದುಪಡಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ವಿಧೇಯಕದ ಪರವಾಗಿ ಏಳು ಮತಗಳು ಚಲಾವಣೆಯಾದರೆ, ವಿಧೇಯಕದ ವಿರುದ್ಧವಾಗಿ 18 ಮತಗಳು ಚಲಾವಣೆಯಾದವು. ಇದರೊಂದಿಗೆ ಸರ್ಕಾರ ಮಂಡಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್ ನಲ್ಲಿ ತಿರಸ್ಕೃತಗೊಂಡಿದೆ.

ಹಿಂದೂ ಧಾರ್ಮಿಕ ದತ್ತಿ ಮಸೂದೆ ತಿರಸ್ಕಾರಗೊಂಡ ನಂತರ ಪ್ರತಿಪಕ್ಷ ಬಿಜೆಪಿ ಸದಸ್ಯರು ಜೈ ಶ್ರೀರಾಮ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಭಾರತ್ ಮಾತಾ ಕಿ ಜೈ ಹಾಗೂ ಜೈ ಭೀಮ್ ಎಂದು ಘೋಷಣೆ ಕೂಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT