ನಟ ದರ್ಶನ್
ನಟ ದರ್ಶನ್  
ರಾಜ್ಯ

ದರ್ಶನ್ ವಿರುದ್ಧ ಸಿಡಿದೆದ್ದ ಶ್ರೀಶಕ್ತಿ ಮಹಿಳಾ ಸಂಘದಿಂದ ದೂರು: ನೀಡಿದ್ದ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!

Vishwanath S

ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಕರ್ನಾಟಕ ಪ್ರಜಾಪರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆಗಿರುವ ಕನ್ನಡ ಶಫಿ ಆದ ನಾನು ನಿಮಗೆ ಹೇಳುವುದೆನೆಂದರೇ ವೇದಿಕೆ ಮೇಲೆ ನಟ ದರ್ಶನ್​ ನಿರ್ಮಾಪಕ ಉಮಾಪತಿ ಬಗ್ಗೆ ಬಳಸಿದ್ದ ಭಾಷೆ ಮುಜುಗರ ತಂದಿತ್ತು. ಹೀಗಾಗಿ ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೇವು. ಚಿತ್ರರಂಗದಲ್ಲಿ ಬೆಳೆದು ನಿಂತಿರುವ ಹಿರಿಯ ನಟನಿಗೆ ಇದರಿಂದ ನೋವಾಗಿದ್ದರೆ ನಮ್ಮ ಸಂಘಟನೆಗಳ ಪರವಾಗಿ ಕನ್ನಡದ ಮನಸ್ಸುಗಳಿಗೆ ಕ್ಷಮೆ ಯಾಚಿಸುತ್ತೇನೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದಾಖಲಿಸಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಮತ್ತೊಂದೆಡೆ, ನಿರ್ಮಾಪಕ ಉಮಾಪತಿ ಕುರಿತು ಅಸಂಬದ್ಧ ಪದ ಬಳಕೆ ಮಾಡಿದ್ದಲ್ಲದೆ ಮಹಿಳೆಯರ ಬಗ್ಗೆಯೂ ಹಗುರವಾಗು ಮಾತನಾಡಿದ್ದಾರೆ ಎಂದು ಶ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ 35ಕ್ಕೂ ಮಹಿಳೆಯರು ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

SCROLL FOR NEXT