ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಬೆಂಗಳೂರಿನ ಜಲಸಮಸ್ಯೆ ಬಗೆಹರಿಸಲು ಕ್ರಮ: ಬೋರ್ ವೆಲ್ ತೆಗೆಸಲು ನಿರ್ಧಾರ

131 ಕೋಟಿ ರೂ ಮೀಸಲು, ನೀರಿನ ಟ್ಯಾಂಕರ್​ಗಳಿಗೆ ದರ ನಿಗದಿ

ಬೆಂಗಳೂರು: ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಕೇಳಿಬರುತ್ತಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ, ಟ್ಯಾಂಕರ್ ನೀರಿಗೆ ನಾಗರಿಕರಿಂದ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳ ಮಧ್ಯೆ ಶನಿವಾರ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದ ಬಳಿಕ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳನ್ನು ಪ್ರಕಟಿಸಿದರು.

ನೀರಿನ ಸಮಸ್ಯೆ ನೀಗಿಸಲು 131 ಕೋಟಿ ರೂ.ಮೀಸಲು: ಬೆಂಗಳೂರಿನಲ್ಲಿ ಉಂಟಾಗಿರುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ 131 ಕೋಟಿ ಹಣ ಮೀಸಲಿಡಲಾಗಿದೆ, ಆರ್ ಆರ್ ನಗರ, ಮಹದೇವಪುರದಲ್ಲಿ ಹೆಚ್ಚಿನ ಸಮಸ್ಯೆಯಾಗಿವೆ. ಆರ್ ಆರ್ ನಗರದ 25 ಕಡೆ ನೀರಿನ ಸಮಸ್ಯೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಖಾಸಗಿ ನೀರಿನ ಟ್ಯಾಂಕರ್​ಗಳನ್ನು ನಾವೇ ತೆಗೆದುಕೊಂಡು ದರ ನಿಗದಿ ಮಾಡುತ್ತೇವೆ. ಆ ದರವನ್ನು ಖಾಸಗಿ ಟ್ಯಾಂಕರ್​​ ಮಾಲೀಕರಿಗೆ ನೀಡುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.

ಬೆಂಗಳೂರಿನಲ್ಲಿ ನೀರಿನ ಲಭ್ಯತೆ ಪರಿಸ್ಥಿತಿ ಈಗ ಹೇಗಿದೆ?: 1,477 ದಶಲಕ್ಷ ಲೀಟರ್ ನೀರು ಈಗ ಲಭ್ಯತೆಯಿದೆ. ಮಾರ್ಚ್ ಏಪ್ರಿಲ್ ಮೇ ತಿಂಗಳಲ್ಲಿ ನೀರನ್ನ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. 1,450 ಎಂಎಲ್ ಡಿ ನೀರಿನ ಸಾಮರ್ಥ್ಯವಿದೆ. 110 ಹಳ್ಳಿಗಳಿಗೆ ಏಪ್ರಿಲ್ ಕಡೆಯಲ್ಲಿ ಕಾವೇರಿ ನೀರು ನೀಡಲಾಗುತ್ತದೆ. ಬಿಬಿಎಂಪಿ ಕಡೆಯಿಂದ ಹಣ ವರ್ಗಾವಣೆಯಾಗಲಿದೆ. ಒಟ್ಟು 58 ಕಡೆಗಳಲ್ಲಿ ಸಾಕಷ್ಟು ಸಮಸ್ಯೆ ಕಂಡು ಬಂದಿದೆ. ಆಡಳಿತಾಧಿಕಾರಿ ನೇತೃತ್ವದಲ್ಲಿ ಬೇಸಿಗೆಯಲ್ಲಿ ನೀರಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಸಿಎಸ್ ಹಲವು ನಿರ್ದೇಶನಗಳನ್ನು ನೀಡಿದ್ದಾರೆ. ಬಿಬಿಎಂಪಿ ಹಾಗೂ ಜಲಮಂಡಳಿ ಕಡೆಯಿಂದ ಹಲವು ಕಾರ್ಯವನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್​ವೆಲ್

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಕ್ರಮಕೈಗೊಳ್ಳಲಾಗುತ್ತದೆ. BBMP, BWSSB, BDA ಸಮನ್ವಯದಿಂದ ಕೆಲಸ ಮಾಡಲು ನಿರ್ಧಾರ ಮಾಡಿದ್ದೇವೆ. 1,472 ಎಂಎಲ್ ಡಿ ನೀರು ಸರಬರಾಜು ಮಾಡಬಹುದು. ಕಾವೇರಿ 5ನೇ ಹಂತ ಕಾಮಗಾರಿ ಮುಗಿದು ಏಪ್ರಿಲ್ ನಿಂದ ನೀರು ಪೂರೈಕೆ ಮಾಡಬಹುದು. ನಾವು ಹಾಗೂ BWSSBಯವರು ಈಗ ಬೋರ್​ವೆಲ್ ಕೊರೆಸುತ್ತೇವೆ. ನಾವು ಪ್ರತಿ ಕ್ಷೇತ್ರಕ್ಕೆ 10 ಕೋಟಿ ಹಣ BWSSBಗೆ ಕೊಡುತ್ತೇವೆ. ಡಿಸಿಎಂ ಗ್ರಾಂಟ್ ನಲ್ಲಿ ಮಾಡಿಸುತ್ತೇವೆ. 110 ಹಳ್ಳಿಗಳಿಗೆ 40 ಸಾವಿರ ಸಂಪರ್ಕ ಕೊಟ್ಟಿದ್ದೇವೆ. ಕಾವೇರಿ 5ನೇ ಹಂತ ಬರುವರೆಗೂ ವಲಯ ಆಯುಕ್ತರು ಹಾಗೂ bwssb ಅಧಿಕಾರಿಗಳು ನಿರ್ವಹಣೆ ಮಾಡುತ್ತಾರೆ ಎಂದರು.

110 ಹಳ್ಳಿಗಳ ನೀರಿನ ನಿರ್ವಹಣೆ ಬಿಬಿಎಂಪಿ ಮಾಡುತ್ತದೆ. ಸಿಟಿ ಲಿಮಿಟ್ಸ್ ನಲ್ಲಿ BWSSB ನಿರ್ವಹಣೆ ಮಾಡುತ್ತದೆ. ಖಾಸಗಿ ಟಾಂಕರ್ ಗಳನ್ನು ಕೂಡ ನಾವು ದುಡ್ಡು ಕೊಟ್ಟು ಕೆಲ ದಿನ ಖರೀದಿ ಮಾಡುತ್ತೇವೆ. ಖಾಸಗಿ ಟ್ಯಾಂಕರ್ ದರ ಕಡಿಮೆ ಮಾಡಲು ನಾವು ಅವರಿಂದ ಖರೀದಿ ಮಾಡುತ್ತೇವೆ. 200 ಟ್ಯಾಂಕರ್ ನಾವು ತೆಗೆದುಕೊಂಡಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!