ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ

ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನಿವಾಸಿ ಚಂದ್ರಕಲಾ ಅವರು ಬುಧವಾರ ಜಿಗಣಿಯ ರಾಮಸಂದ್ರದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರುಣ್ ಜೊತೆಗೆ ಯುವತಿ ಪ್ರೀತಿಯಲ್ಲಿ ಬಿದ್ದಿದ್ದಳು, ಈ ಸಂಬಂಧದ ಬಗ್ಗೆ ತಿಳಿದಿದ್ದ ಚಂದ್ರಕಲಾ ಪೋಷಕರು, ಆತ ಕೆಟ್ಟ ಸಹವಾಸದಲ್ಲಿದ್ದು, ದುಶ್ಚಟಗಳಿಗೆ ವ್ಯಸನಿ ಎಂಬ ಕಾರಣದಿಂದ ಆತನ ಜೊತೆಗಿನ ಸಂಬಂಧ ಕೊನೆಗೊಳಿಸುವಂತೆ ಮಗಳಿಗೆ ಬುದ್ದಿ ಹೇಳಿದ್ದಾರೆ.

ಆನಂತರ ಚಂದ್ರಕಲಾ ತಮ್ಮ ದೂರದ ಸಂಬಂಧಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ವಿಷಯ ತಿಳಿದ ಅರುಣ್ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದನು ಮತ್ತು ಆಕೆಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವರನಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರುಕುಳ ತಾಳಲಾರದೆ ಚಂದ್ರಕಲಾ ಮಂಗಳವಾರ ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಅರುಣ್ ತನ್ನನ್ನು ನಿಯಮಿತವಾಗಿ ಹಿಂಬಾಲಿಸುತ್ತಿದ್ದನು ಮತ್ತು ತನ್ನ ನಿಶ್ಚಿತಾರ್ಥವನ್ನು ರದ್ದುಗೊಳಿಸಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದನು ಎಂದು ಆರೋಪಿಸಲಾಗಿದೆ.

ನಿಶ್ಚಿತಾರ್ಥವಾಗಿದ್ದ ವರನಿಗೆ ತಮ್ಮ ಸಂಬಂಧದ ಬಗ್ಗೆ ತಿಳಿಸಿ ತಾನು ಸಾಯುವುದಾಗಿ ಅರುಣ್ ಚಂದ್ರಕಲಾಗೆ ಬೆದರಿಕೆ ಹಾಕಿದ್ದ ಎಂದು ಆಕೆಯ ತಂದೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಜಿಗಣಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕೆಯ ಸಾವಿಗೆ ಅರುಣ್ ಕಾರಣ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!