ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ

ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನಿವಾಸಿ ಚಂದ್ರಕಲಾ ಅವರು ಬುಧವಾರ ಜಿಗಣಿಯ ರಾಮಸಂದ್ರದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರುಣ್ ಜೊತೆಗೆ ಯುವತಿ ಪ್ರೀತಿಯಲ್ಲಿ ಬಿದ್ದಿದ್ದಳು, ಈ ಸಂಬಂಧದ ಬಗ್ಗೆ ತಿಳಿದಿದ್ದ ಚಂದ್ರಕಲಾ ಪೋಷಕರು, ಆತ ಕೆಟ್ಟ ಸಹವಾಸದಲ್ಲಿದ್ದು, ದುಶ್ಚಟಗಳಿಗೆ ವ್ಯಸನಿ ಎಂಬ ಕಾರಣದಿಂದ ಆತನ ಜೊತೆಗಿನ ಸಂಬಂಧ ಕೊನೆಗೊಳಿಸುವಂತೆ ಮಗಳಿಗೆ ಬುದ್ದಿ ಹೇಳಿದ್ದಾರೆ.

ಆನಂತರ ಚಂದ್ರಕಲಾ ತಮ್ಮ ದೂರದ ಸಂಬಂಧಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ವಿಷಯ ತಿಳಿದ ಅರುಣ್ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದನು ಮತ್ತು ಆಕೆಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವರನಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರುಕುಳ ತಾಳಲಾರದೆ ಚಂದ್ರಕಲಾ ಮಂಗಳವಾರ ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಅರುಣ್ ತನ್ನನ್ನು ನಿಯಮಿತವಾಗಿ ಹಿಂಬಾಲಿಸುತ್ತಿದ್ದನು ಮತ್ತು ತನ್ನ ನಿಶ್ಚಿತಾರ್ಥವನ್ನು ರದ್ದುಗೊಳಿಸಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದನು ಎಂದು ಆರೋಪಿಸಲಾಗಿದೆ.

ನಿಶ್ಚಿತಾರ್ಥವಾಗಿದ್ದ ವರನಿಗೆ ತಮ್ಮ ಸಂಬಂಧದ ಬಗ್ಗೆ ತಿಳಿಸಿ ತಾನು ಸಾಯುವುದಾಗಿ ಅರುಣ್ ಚಂದ್ರಕಲಾಗೆ ಬೆದರಿಕೆ ಹಾಕಿದ್ದ ಎಂದು ಆಕೆಯ ತಂದೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಜಿಗಣಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕೆಯ ಸಾವಿಗೆ ಅರುಣ್ ಕಾರಣ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT