ಎನ್.ಎಸ್. ಭೋಸರಾಜು 
ರಾಜ್ಯ

ರಾಯಚೂರು ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ

ರಾಯಚೂರಿನ ವಿಜ್ಞಾನ ಕೇಂದ್ರವನ್ನು ಕೆಟಗರಿ - 2 ವಿಜ್ಞಾನ ಕೇಂದ್ರವಾಗಿ ಅಂದಾಜು ರೂ. 22.25 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ರಾಯಚೂರಿನ ವಿಜ್ಞಾನ ಕೇಂದ್ರವನ್ನು ಕೆಟಗರಿ - 2 ವಿಜ್ಞಾನ ಕೇಂದ್ರವಾಗಿ ಅಂದಾಜು ರೂ. 22.25 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಶನಿವಾರ ತಿಳಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಯನ್ನು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳೂ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅಧ್ಯಕ್ಷನಾಗಿದ್ದ ಸಂಧರ್ಭದಲ್ಲಿ ಅಗತ್ಯ ಅನುದಾನ ನೀಡುವ ಮೂಲಕ ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸಂಸ್ಕೃತಿ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಖುದ್ಧು ಭೇಟಿ ಮಾಡಿ ಉನ್ನತೀಕರಣಕ್ಕಾಗಿ ಮನವಿ ಸಲ್ಲಿಸಿದ್ದಾಗಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕೇಂದ್ರ ತಂಡ ರಾಯಚೂರಿಗೆ ಭೇಟಿ ನೀಡಿತು. ಕೇಂದ್ರ ಸರಕಾರಕ್ಕೆ ಈ ತಂಡ ಸಲ್ಲಿಸಿದ ವರದಿಯ ಅನ್ವಯ ಕೆಟಗರಿ - 2 ರ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸುವಂತಹ ಪ್ರಸ್ತಾವನೆಯನ್ನ ಸಚಿವ ಸಂಪುಟಕ್ಕೆ ಸಲ್ಲಿಸಲಾಗಿತ್ತು. ಕೂಲಂಕುಷವಾದ ಚರ್ಚೆಯ ನಂತರ, ಪ್ರಸ್ತಾವನೆಯು ಸಂಪುಟ ಸಭೆಯಲ್ಲಿ ಸರ್ವಾನುಮತದ ಅನುಮೋದನೆಯನ್ನು ಪಡೆಯಿತು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

SCROLL FOR NEXT