ಡಿಸಿಎಂ ಡಿಕೆ ಶಿವಕುಮಾರ್ EXPRESS
ರಾಜ್ಯ

ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಕಾಯ್ದೆಗೆ ಅನುಮೋದನೆ- ಡಿಕೆ ಶಿವಕುಮಾರ್

ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ತಿರಸ್ಕೃತಗೊಂಡಿರುವ ಹಿಂದೂ ಧಾರ್ಮಿಕ ದತ್ತಿ ವಿಧೇಯಕಕ್ಕೆ ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತೆ ಬಹುಮತ ಬಂದಾಗ ಅನುಮೋದನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಶಿವಮೊಗ್ಗ: ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ತಿರಸ್ಕೃತಗೊಂಡಿರುವ ಹಿಂದೂ ಧಾರ್ಮಿಕ ದತ್ತಿ ವಿಧೇಯಕಕ್ಕೆ ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತೆ ಬಹುಮತ ಬಂದಾಗ ಅನುಮೋದನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಇಲ್ಲಿನ ಅಲ್ಲಮ ಪ್ರಭು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ಅರ್ಚಕರ ಪ್ರಭಾವದಿಂದ ಭಕ್ತರು ಕಲ್ಲಿನಲ್ಲೂ ಶಿವನನ್ನು ಕಾಣುತ್ತಾರೆ. “ನಾವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆ ಮಂಡಿಸಿದ್ದೇವು. ಸರ್ಕಾರ ಈ ಶಾಸನ ಮೂಲಕ ದೊಡ್ಡ ದೇವಾಲಯಗಳಿಂದ ಬರುವ ಆದಾಯದ ಶೇ.10 ರಷ್ಟನ್ನು ಅರ್ಚಕರಿಗೆ ಸಂಬಳ ನೀಡಲು, ವಿಮಾ ರಕ್ಷಣೆ, ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಬಯಸಿತ್ತು. ಆದರೆ, ದೇವಸ್ಥಾನ ಮತ್ತು ಧರ್ಮದ ಪರ ವಾದಿಸುವ ಬಿಜೆಪಿ ಮತ್ತು ಜೆಡಿಎಸ್‌ಗಳು ಪರಿಷತ್ತಿನಲ್ಲಿ ಮಸೂದೆಯನ್ನು ಸೋಲಿಸಿದವು. ಮೂರು ತಿಂಗಳಲ್ಲಿ ಮೇಲ್ಮನೆಯಲ್ಲಿ ಬಹುಮತ ಪಡೆದು ಮಸೂದೆ ಮಂಡನೆ ಮಾಡುತ್ತೇವೆ ಎಂದು ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದ್ದು, ಇದಕ್ಕೆ ಯಾರೂ ಅಡ್ಡಿಪಡಿಸಲು ಸಾಧ್ಯವಿಲ್ಲ. ಬಡವರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಲು ಸರ್ಕಾರ ಅನುಮತಿ ನೀಡುವುದಿಲ್ಲ ಅರಣ್ಯ ಹಕ್ಕು ಕಾಯ್ದೆಯಡಿ ಪ್ರಾಥಮಿಕವಾಗಿ 75 ವರ್ಷಗಳಿಂದ ಪ್ರಾಮಾಣಿಕ ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯಲ್ಲಿ ವಾಸಿಸುವ ನಿವಾಸಿಗಳು ಅರಣ್ಯ ಹಕ್ಕುಗಳನ್ನು ಪಡೆಯಬಹುದು ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಬಡ ಜನರನ್ನು ಅರಣ್ಯದಿಂದ ಸ್ಥಳಾಂತರಿಸುವುದಿಲ್ಲ, ಮುಂದೆ ಶರಾವತಿ ಯೋಜನೆ ಸಂತ್ರಸ್ತರ ಹಿತಾಸಕ್ತಿ ಕಾಪಾಡುವುದಾಗಿ ಭರವಸೆ ನೀಡಿದರು.

ಮತ್ತೊಂದೆಡೆ ಹಾಸನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಲ್ಮನೆಯಲ್ಲಿ ಹಿಂದೂ ಧರ್ಮದಾಯಿ ದತ್ತಿ ಕಾಯ್ದೆ ಸೋಲಿಗೆ ಪ್ರಮುಖವಾಗಿ ಬಿಜೆಪಿಯನ್ನು ದೂಷಿಸಿದರು. ಈ ವಿಚಾರದಲ್ಲಿ ಸುಳ್ಳು ಮಾಹಿತಿಯನ್ನು ಕೇಸರಿ ಪಕ್ಷ ಹರಡುತ್ತಿದೆ ಎಂದು ಆರೋಪಿಸಿದರು.

ಅಧಿಕ ಆದಾಯ ಬರುವ ದೇವಸ್ಥಾನಗಳ ಹಣದಲ್ಲಿ ಅಲ್ಪ ಆದಾಯ ಬರುವ ದೇವಾಲಯಗಳ ಅರ್ಚಕರಿಗೆ ವಿಮಾ ಸೌಲಭ್ಯ, ಅವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಸದುದ್ದೇಶದೊಂದಿಗೆ ನಮ್ಮ ಸರ್ಕಾರವು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ಮುಂದಾದ ರಷ್ಯಾ!

ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

'ತುಂಬಾ ಲೇಟ್ ಆಯಿತು': ಇರಾನ್​ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು

SCROLL FOR NEXT