ನಿತಾಶಾ ಕೌಲ್ 
ರಾಜ್ಯ

ಕರ್ನಾಟಕ ಸರ್ಕಾರದ ಆಹ್ವಾನವಿದ್ದರೂ ಭಾರತಕ್ಕೆ ನನಗೆ ಪ್ರವೇಶ ನಿರಾಕರಿಸಲಾಗಿದೆ: ಭಾರತೀಯ ಮೂಲದ ಯುಕೆ ಪ್ರೊಫೆಸರ್

ಭಾರತೀಯ ಮೂಲದ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರಿಗೆ ಕೇಂದ್ರ ಸರ್ಕಾರ ಪ್ರವೇಶ ನಿರಾಕರಿಸಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತೆ ಸಮ್ಮೇಳನದಲ್ಲಿ ಭಾಷಣ ಮಾಡಲು ಭಾರತಕ್ಕೆ ಆಗಮಿಸಿದ್ದ ಭಾರತೀಯ ಮೂಲದ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರಿಗೆ ಕೇಂದ್ರ ಸರ್ಕಾರ ಪ್ರವೇಶ ನಿರಾಕರಿಸಿದೆ. ತಮ್ಮನ್ನು ಬೆಂಗಳೂರು ವಿಮಾನ ನಿಲ್ದಾಣದಿಂದಲೇ ಅವರನ್ನು ವಾಪಸ್ ಕಳುಹಿಸಲಾಗಿದೆ ಎಂದು ಕೌಲ್ ಭಾನುವಾರ ಆರೋಪಿಸಿದ್ದಾರೆ.

ಕರ್ನಾಟಕ ಸರ್ಕಾರ ಸಮ್ಮೇಳನದಲ್ಲಿ ಭಾಗವಹಿಸುವಂತೆ ತಮಗೆ ಆಹ್ವಾನ ನೀಡಿತ್ತು ಮತ್ತು ತಾವು ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಭಾರತ ಸರ್ಕಾರ ಪ್ರವೇಶ ನಿರಾಕರಿಸಿದೆ ಎಂದು ಕೌಲ್ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾವು ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಟೀಕಿಸಿದ್ದರಿಂದ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಕೌಲ್ ಆರೋಪಿಸಿದ್ದಾರೆ.

"ನನಗೆ ಯಾವುದೇ ಕಾರಣ ನೀಡದೇ ಪ್ರವೇಶ ನಿರಾಕರಿಸಲಾಗಿದೆ. ದೆಹಲಿಯಿಂದ ಆದೇಶ ಬಂದಿದೆ. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ಮಾತ್ರ ಹೇಳಿದ್ದಾರೆ. ನನ್ನ ಪ್ರಯಾಣ ಮತ್ತು ಲಾಜಿಸ್ಟಿಕ್ಸ್ ಅನ್ನು ಕರ್ನಾಟಕದಿಂದ ವ್ಯವಸ್ಥೆ ಮಾಡಲಾಗಿದೆ ಮತ್ತು ನನ್ನ ಬಳಿ ಅಧಿಕೃತ ಪತ್ರವಿದೆ. ನನಗೆ ಪ್ರವೇಶ ನಿರಾಕರಿಸಿರುವ ಬಗ್ಗೆ ದೆಹಲಿಯಿಂದ ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ಮುಂಚಿತವಾಗಿ ನೀಡಿಲ್ಲ" ಪ್ರೊಫೆಸರ್ ಕೌಲ್ X ನಲ್ಲಿ ಬರೆದಿದ್ದಾರೆ.

ನಾನು ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ನನ್ನನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ. ನಾನು ಲಂಡನ್‌ನಿಂದ ಬೆಂಗಳೂರಿಗೆ ವಿಮಾನದಲ್ಲಿ 12 ಗಂಟೆಗಳನ್ನು ಕಳೆದಿದ್ದೇನೆ. ವಲಸೆಯಲ್ಲಿ ಹಲವಾರು ಗಂಟೆಗಳ ಕಾಲ ನನ್ನನ್ನು ವಿಚಾರಣೆ ನಡೆಸಿದರು ಮತ್ತು 24 ಗಂಟೆಗಳ ನಂತರ ವಾಪಸ್ ಕಳುಹಿಸಿದರು ಎಂದು ಕೌಲ್ ಆರೋಪಿಸಿದ್ದಾರೆ.

"ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಮೌಲ್ಯಗಳ" ಕುರಿತು ಶನಿವಾರ ಮತ್ತು ರವಿವಾರ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತೆ ಸಮ್ಮೇಳನಕ್ಕೆ ನಿತಾಶಾ ನಿತಾಶಾ ಕೌಲ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ಮಾನ್ಯತೆ ಹೊಂದಿರುವ ವೀಸಾ ಹೊಂದಿದ್ದ ಹೊರತಾಗಿಯೂ, ಬೆಂಗಳೂರಿಗೆ ಬಂದಿಳಿದಾಗ ವಿಮಾನ ನಿಲ್ದಾಣದಿಂದ ತೆರಳಲು ತಮಗೆ ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT