ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: ಅಪರಿಚಿತರಿಂದ ಮಹಿಳೆ, ಇಬ್ಬರು ಮಕ್ಕಳು ಕೊಲೆ ಶಂಕೆ!

ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸಾವಿತ್ರಿ ಸರ್ಕಾರ್ (32) ಮತ್ತು ಆಕೆಯ ಮಕ್ಕಳಾದ ಸುಮಾ (5) ಮತ್ತು ದರ್ಶನ್ (4) ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗೆ ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಯಾವುದೇ ಸದ್ದುಗದ್ದಲ, ಚಟುವಟಿಕೆ ಇಲ್ಲದಿರುವುದು ಕಂಡು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೂವರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಸಾವಿತ್ರಿ ನೇಣು ಬಿಗಿದುಕೊಂಡು ತನ್ನ ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಿರಬಹುದು ಎಂದು ಕೆಲವರು ಶಂಕಿಸಿದ್ದಾರೆ. ಸಾವಿತ್ರಿ ಅವರ ಪತಿ, ಕೃಷಿಕರಾಗಿದ್ದು ಉಳವಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಉಳವಿಗೆ ತೆರಳಿದ್ದರು.

ನೆರೆಹೊರೆಯವರ ಪ್ರಕಾರ, ದಂಪತಿ ಮತ್ತು ಇತರ ಕುಟುಂಬ ಸದಸ್ಯರ ನಡುವೆ ಯಾವುದೇ ವಿವಾದ ಇರಲಿಲ್ಲ. ಸಾವಿತ್ರಿ ಸಮೀಪದ ಸುಳ್ಯದ ನಿವಾಸಿಯಾಗಿದ್ದರು. ಶನಿವಾರ ರಾತ್ರಿ ನೆರೆಹೊರೆಯವರೊಂದಿಗೆ ಮಾತನಾಡಿದ್ದಳು. ಆಕೆ ಉಳವಿಗೆ ಹೋಗಲು ಬಯಸಿದ್ದರು ಆದರೆ ಆಕೆಯ ಪತಿ ಅವಳನ್ನು ಕರೆದುಕೊಂಡು ಹೋಗಲು ನಿರಾಕರಿಸಿದರು ಎಂಬ ವದಂತಿಗಳಿವೆ.

ಸಾವಿತ್ರಿ ತುಂಬಾ ಚಟುವಟಿಕೆಯಿಂದಿದ್ದ ಗೃಹಿಮಿಯಾಗಿದ್ದರು ಹಬ್ಬಗಳು ಮತ್ತು ಇತರ ಎಲ್ಲಾ ಸಂದರ್ಭಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ, ಆದರೆ, ಅಪರಿಚಿತರು ಮೂವರನ್ನು ಕೊಲೆ ಮಾಡಿರಬಹುದು ಎಂದು ಮಹಿಳೆಯ ಕುಟುಂಬಸ್ಥರು ಶಂಕಿಸಿದ್ದಾರೆ. ನವಲಗುಂದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT