ಬ್ರಿಟನ್ ಲೇಖಕಿ ನಿತಾಶಾ ಕೌಲ್‌  
ರಾಜ್ಯ

ಬ್ರಿಟನ್ ಲೇಖಕಿ ನಿತಾಶಾ ಕೌಲ್‌ ಬೆಂಗಳೂರು ಪ್ರವೇಶಕ್ಕೆ ಅನುಮತಿ ನಕಾರ: ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ!

ರಾಜ್ಯ ಸರ್ಕಾರದ ಅಧಿಕೃತ ಆಹ್ವಾನದ ಮೇರೆಗೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್‌ನ ಪ್ರೊಫೆಸರ್‌, ಭಾರತ ಮೂಲದ ನಿತಾಶಾ ಕೌಲ್ ಅವರು ಬೆಂಗಳೂರು ಪ್ರವೇಶಿಸದಂತೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿಯೇ ತಡೆದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ರಾಜಕೀಯ ವಲಯದಲ್ಲಿ ಕೆಸರೆರಚಾಟ ಆರಂಭವಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಆಹ್ವಾನದ ಮೇರೆಗೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್‌ನ ಪ್ರೊಫೆಸರ್‌, ಭಾರತ ಮೂಲದ ನಿತಾಶಾ ಕೌಲ್ ಅವರು ಬೆಂಗಳೂರು ಪ್ರವೇಶಿಸದಂತೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿಯೇ ತಡೆದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ರಾಜಕೀಯ ವಲಯದಲ್ಲಿ ಕೆಸರೆರಚಾಟ ಆರಂಭವಾಗಿದೆ.

"ಸರ್ವಾಧಿಕಾರದ ಕೃತ್ಯ" ಎಂದು ಕಾಂಗ್ರೆಸ್ ನಾಯಕರು ಖಂಡಿಸುತ್ತಿದ್ದು, ‘ನಿತಾಶಾ ಕೌಲ್‌ ಭಾರತ ವಿರೋಧಿ’ ಎಂದು ಬಿಜೆಪಿ ಟೀಕಿಸಿದೆ.

ವ್ಯಕ್ತಿಯ ಮೂಲಭೂತ ಹಕ್ಕು ಹಾಗೂ ರಾಜ್ಯ ಸರ್ಕಾರದ ಹಕ್ಕುಗಳನ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನವಾಗಿದೆ. ‘ದೇಶದಲ್ಲಿ ಸಾಂವಿಧಾನಿಕ ಚಿಂತನೆಗಳಿಗೆ ಎದುರಾಗಿರುವ ಸವಾಲುಗಳಿಗೆ ಇದು ಉದಾಹರಣೆ. ಎಲ್ಲ ನಾಗರಿಕರು ಇಂಥ ಪ್ರಕರಣಗಳನ್ನು ಎದುರಿಸಲು, ಸಂವಿಧಾನ ರಕ್ಷಿಸಲು ಒಗ್ಗಟ್ಟಾಗಬೇಕಾಗಿದೆ’ ಎಂದು ಹೇಳಿದ್ದಾರೆ.

ಸಮಾವೇಶವನ್ನು ಆಯೋಜಿಸುವುದು ಹಾಗೂ ಅದಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿ ಮತ್ತು ರಾಜ್ಯದ ಅಭಿವೃದ್ಧಿಯನ್ನು ಅರ್ಥಪೂರ್ಣವಾಗಿ ಬಿಂಬಿಸುವ ಪರಿಣತರನ್ನು ಆಹ್ವಾನಿಸುವುದು ರಾಜ್ಯ ಸರ್ಕಾರದ ಹಕ್ಕು. ಇದು ಸಂವಿಧಾನದತ್ತವಾಗಿದೆ. ಕೇಂದ್ರ ಸರ್ಕಾರ ಇದನ್ನು ಅಲಕ್ಷಿಸಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ "ಭಾರತದ ಸಂವಿಧಾನ ಮತ್ತು ಏಕತೆ" ಕುರಿತು ಮಾತನಾಡಲು ನಿತಾಶಾ ಕೌಲ್ ಅವರನ್ನು ಆಹ್ವಾನಿಸುವ ಮೂಲಕ "ತುಕ್ಡೆ ತುಕ್ಡೆ ಗ್ಯಾಂಗ್" ನ ಅಪರಾಧಗಳನ್ನು ವೈಟ್ ವಾಷ್ ಮಾಡಲು ಸಿದ್ದರಾಮಯ್ಯ ಸರ್ಕಾರ ಯತ್ನಿಸಿರುವುದು ಅಸಹ್ಯಕರವಾಗಿದೆ ಎಂದು ಹೇಳಿದ್ದಾರೆ.

ಒಬ್ಬ ಪ್ರಸಿದ್ಧ ಭಯೋತ್ಪಾದಕ ನಿರಂತರವಾಗಿ ವಿಷವನ್ನು ಉಗುಳುವ ಮತ್ತು ಭಾರತದ ಶತ್ರುಗಳ ಜೊತೆಯಲ್ಲಿ ಭಾರತ ವಿರೋಧಿ ಪ್ರಚಾರವನ್ನು ಪ್ರಸಾರ ಮಾಡುವ ಒಬ್ಬನಿಗೆ ಕಾಂಗ್ರೆಸ್ ರೆಡ್ ಕಾರ್ಪೆಟ್ ಮೂಲಕ ಸ್ವಾಗತ ಕೋರುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಿರುವುದು ಅಸಹ್ಯಕರ ಸಂಗತಿಯಾಗಿದೆ.

ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿರುವಾಗ ಸರ್ಕಾರ ಇಂತಹ ಸಮಾವೇಶಗಳನ್ನು ಆಯೋಜಿಸುವ ಮೂಲಕ ಅನಗತ್ಯ ವೆಚ್ಚ ಮಾಡುತ್ತಿದೆ. ಇದೇ ಮೊತ್ತದಲ್ಲಿ ಎಷ್ಟೋ ರೈತರಿಗೆ ನೆರವು ನೀಡಬಹುದಾಗಿತ್ತು ಎಂದು ಟೀಕಿಸಿದ್ದಾರೆ.

ಇನ್ಫೋಸಿಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಮೋಹನ್‌ದಾಸ್ ಪೈ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ಇಸಿಸ್ ಬೆಂಬಲಿಗ ಇಲ್ಲಿಗೆ ಬರುವುದರಿಂದ ನಮ್ಮ ನಗರವನ್ನು ಕಲುಷಿತಗೊಳ್ಳಲಿದೆ. ಇದನ್ನು ನಾವು ಬಯಸುವುದಿಲ್ಲ. ಅವಳು ಎಂದಿನಂತೆ ಭಾರತದ ಮೇಲೆ ವಿಷ ಉಗುಳುವುದನ್ನು ಮುಂದುವರಿಸುತ್ತಾಳೆ. ಅವಳು ತನಗೆ ಬೇಕಾದುದನ್ನು ಮಾಡಲಿ. ಆದರೆ, ಅದು ದೇಶದ ಹೊರಗಿರಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT