ಬಿಬಿಎಂಪಿ 
ರಾಜ್ಯ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ನಿಯಮ ಅನುಸರಿಸದ ವ್ಯಾಪಾರಿಗಳು, ಅಂಗಡಿಗಳಿಗೆ ಬಿಬಿಎಂಟಿ ನೋಟಿಸ್

ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ನೀತಿಯ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿ ಆರೋಗ್ಯ ಇಲಾಖೆ ನಿಯಮವನ್ನು ಅನುಸರಿಸದ 50 ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ನೀತಿಯ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿ ಆರೋಗ್ಯ ಇಲಾಖೆ ನಿಯಮವನ್ನು ಅನುಸರಿಸದ 50 ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದೆ.

ಅಧಿಕಾರಿಗಳ ಪ್ರಕಾರ, ಆರೋಗ್ಯ ನಿರೀಕ್ಷಕರು ಮಾರ್ಷಲ್‌ಗಳನ್ನು ನಿಯೋಜಿಸಿ ಮತ್ತು ನಿರಂತರ ತಪಾಸಣೆಯ ಮೂಲಕ ಈ ಆದೇಶವನ್ನು 40,000ಕ್ಕೂ ಹೆಚ್ಚು ಅಂಗಡಿ ಮತ್ತು ಸಂಸ್ಥೆಗಳಲ್ಲಿ ಜಾರಿಗೊಳಿಸಲಾಗಿದೆ ಮತ್ತು 3,616 ಪ್ರಕರಣಗಳು ಬಾಕಿ ಉಳಿದಿವೆ. ಅಧಿಕಾರಿಗಳು ಫೆಬ್ರುವರಿ 28 ಅನ್ನು ನೀತಿಯ ಅನುಷ್ಠಾನಕ್ಕೆ ಕೊನೆಯ ದಿನಾಂಕವೆಂದು ನಿಗದಿಪಡಿಸಿದ್ದಾರೆ. ವಿಫಲವಾದರೆ ಬಿಬಿಎಂಪಿಯು ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಬಹುದು ಮತ್ತು ದಂಡವನ್ನು ವಿಧಿಸಬಹುದು.

ಬಿಬಿಎಂಪಿ ಆರೋಗ್ಯ ಇಲಾಖೆಯ ಮುಖ್ಯ ಆರೋಗ್ಯಾಧಿಕಾರಿ ಸೈಯದ್ ಸಿರಾಜುದ್ದೀನ್ ಮದನಿ ಪ್ರಕಾರ, ಪಾಲಿಕೆಯು ಸುಮಾರು 50,220 ನಿಯಮ ಉಲ್ಲಂಘನೆ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು 50,216 ಪ್ರಕರಣಗಳಲ್ಲಿ ಆದೇಶದ ಅನುಷ್ಠಾನಕ್ಕೆ ನೋಟಿಸ್ ನೀಡಿದೆ. ಇಲ್ಲಿಯವರೆಗೆ, 46,600 ಅಂಗಡಿಗಳು ಮತ್ತು ವ್ಯಾಪಾರಿಗಳು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿ ಹೊರಡಿಸಿದ ಆದೇಶವನ್ನು ಜಾರಿಗೆ ತಂದಿದ್ದಾರೆ. ಸೂಚನಾ ಫಲಕದಲ್ಲಿ ಶೇ 60ರಷ್ಟು ಕನ್ನಡ ಪ್ರದರ್ಶಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಲಯ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಇತ್ತೀಚೆಗೆ, ಫೆಬ್ರುವರಿ 28ರ ಸರ್ಕಾರದ ಗಡುವಿನ ಹೊರತಾಗಿಯೂ, ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ನೀತಿಯನ್ನು ಅನುಷ್ಠಾನ ಮಾಡುವಲ್ಲಿ ವಿಫಲವಾದ ಆರೋಪದ ಮೇರೆಗೆ ಕೆಆರ್ ಪುರಂನ ಹಿರಿಯ ಆರೋಗ್ಯ ನಿರೀಕ್ಷಕರನ್ನು ಅಮಾನತು ಮಾಡಲಾಗಿದೆ.

ಶೇ 60ರಷ್ಟು ಕನ್ನಡ ನಿಯಮ ಜಾರಿ ಮಾಡದ ಟಿ.ಸಿ.ಪಾಳ್ಯದ ಅಂಗಡಿಗಳ ನಾಮಫಲಕಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಎಲ್.ವಿಶ್ವನಾಥ್ ಅವರನ್ನು ಬಿಬಿಎಂಪಿ ಅಮಾನತು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!