ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಅಡ್ಡ ಮತದಾನದ ಭೀತಿ, ಶಾಸಕರಿಗೆ ಸಿಎಂ-ಡಿಸಿಎಂ ಕಿವಿಮಾತು

ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.

ಬೆಂಗಳೂರು: ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಅಡ್ಡ ಮತದಾನದ ಆತಂಕ ಪಕ್ಷಗಳಿಗೆ ಎದುರಾಗಿದ್ದು, ಈ ಅಡ್ಡ ಮತದಾನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದಕ್ಕೆ ಸ್ಥಳಾಂತರಿಸಿದೆ.

ಹೊಟೇಲ್​​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮತದಾನದ ಬಗ್ಗೆ ಸಿಎಂ, ಡಿಸಿಎಂ ಶಾಸಕರಿಗೆ ಕಿವಿಮಾತು ಹೇಳಿದರು.

ಯಾವ ರೀತಿ ಮತ ಹಾಕಬೇಕು. ಮೂವರು ಕೈ ಅಭ್ಯರ್ಥಿಗಳ ಪೈಕಿ ಯಾರು ಯಾರಿಗೆ ಮತ ಹಾಕಬೇಕು ಎಂಬುದರ ಬಗ್ಗೆ ತಿಳಿಸಲಾಯಿತು. ಮತ ಅಸಿಂಧುವಾಗದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಯಿತು‌.

ಕಾಂಗ್ರೆಸ್ ಶಾಸಕರಲ್ಲಿ ಹಲವರು ಮೊದಲ‌ ಬಾರಿಗೆ ಶಾಸಕರಾಗಿದ್ದು, ಅವರಿಗೆ ರಾಜ್ಯಸಭೆ ಚುನಾವಣೆಯ ಪ್ರಕ್ರಿಯೆ, ಮತದಾನ ವಿಧಾನದ ಬಗ್ಗೆ ತಿಳಿ ಹೇಳಲಾಯಿತು. ಯಾವುದೇ ಗೊಂದಲ ಇಲ್ಲದೇ ಮತದಾನ‌ ಮಾಡುವಂತೆ ಎಚ್ಚರಿಕೆ ನೀಡಲಾಯಿತು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹೋಟೆಲ್​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಯಿತು. ಅಣಕು ಮತದಾನ ನಡೆಸಿ, ಮಂಗಳವಾರ ಹೋಟೆಲ್​​ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಬೆಳಗ್ಗೆ 10 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ.

ಒಟ್ಟು 4 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 223 ಶಾಸಕರು ಮತ ಚಲಾಯಿಸಲಿದ್ದಾರೆ. ಶಾಸಕರ ಸಂಖ್ಯಾಬಲದಂತೆ ನಾಲ್ಕು ಸ್ಥಾನದ ಪೈಕಿ ಕಾಂಗ್ರೆಸ್‌ಗೆ 3, ಬಿಜೆಪಿಗೆ 1 ಸ್ಥಾನದ ಗೆಲುವು ಸಲೀಸಾಗಲಿದೆ.

ಕಾಂಗ್ರೆಸ್‌ನಿಂದ ಅಜಯ್ ಮಕೇನ್, ಜಿ.ಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT