ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಅಡ್ಡ ಮತದಾನದ ಭೀತಿ, ಶಾಸಕರಿಗೆ ಸಿಎಂ-ಡಿಸಿಎಂ ಕಿವಿಮಾತು

ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.

ಬೆಂಗಳೂರು: ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಅಡ್ಡ ಮತದಾನದ ಆತಂಕ ಪಕ್ಷಗಳಿಗೆ ಎದುರಾಗಿದ್ದು, ಈ ಅಡ್ಡ ಮತದಾನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದಕ್ಕೆ ಸ್ಥಳಾಂತರಿಸಿದೆ.

ಹೊಟೇಲ್​​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮತದಾನದ ಬಗ್ಗೆ ಸಿಎಂ, ಡಿಸಿಎಂ ಶಾಸಕರಿಗೆ ಕಿವಿಮಾತು ಹೇಳಿದರು.

ಯಾವ ರೀತಿ ಮತ ಹಾಕಬೇಕು. ಮೂವರು ಕೈ ಅಭ್ಯರ್ಥಿಗಳ ಪೈಕಿ ಯಾರು ಯಾರಿಗೆ ಮತ ಹಾಕಬೇಕು ಎಂಬುದರ ಬಗ್ಗೆ ತಿಳಿಸಲಾಯಿತು. ಮತ ಅಸಿಂಧುವಾಗದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಯಿತು‌.

ಕಾಂಗ್ರೆಸ್ ಶಾಸಕರಲ್ಲಿ ಹಲವರು ಮೊದಲ‌ ಬಾರಿಗೆ ಶಾಸಕರಾಗಿದ್ದು, ಅವರಿಗೆ ರಾಜ್ಯಸಭೆ ಚುನಾವಣೆಯ ಪ್ರಕ್ರಿಯೆ, ಮತದಾನ ವಿಧಾನದ ಬಗ್ಗೆ ತಿಳಿ ಹೇಳಲಾಯಿತು. ಯಾವುದೇ ಗೊಂದಲ ಇಲ್ಲದೇ ಮತದಾನ‌ ಮಾಡುವಂತೆ ಎಚ್ಚರಿಕೆ ನೀಡಲಾಯಿತು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹೋಟೆಲ್​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಯಿತು. ಅಣಕು ಮತದಾನ ನಡೆಸಿ, ಮಂಗಳವಾರ ಹೋಟೆಲ್​​ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಬೆಳಗ್ಗೆ 10 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ.

ಒಟ್ಟು 4 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 223 ಶಾಸಕರು ಮತ ಚಲಾಯಿಸಲಿದ್ದಾರೆ. ಶಾಸಕರ ಸಂಖ್ಯಾಬಲದಂತೆ ನಾಲ್ಕು ಸ್ಥಾನದ ಪೈಕಿ ಕಾಂಗ್ರೆಸ್‌ಗೆ 3, ಬಿಜೆಪಿಗೆ 1 ಸ್ಥಾನದ ಗೆಲುವು ಸಲೀಸಾಗಲಿದೆ.

ಕಾಂಗ್ರೆಸ್‌ನಿಂದ ಅಜಯ್ ಮಕೇನ್, ಜಿ.ಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT