ಪ್ರಾತಿನಿಧಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ತಾಪಮಾನ ಇನ್ನೂ 2 ಡಿಗ್ರಿ ಸೆಲ್ಸಿಯಸ್‌ ಏರಿಕೆ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ

ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ತಾಪಮಾನವು ಕಳೆದ ವರ್ಷ ಫೆಬ್ರವರಿಗಿಂತ 1-2 ಡಿಗ್ರಿ ಹೆಚ್ಚಾಗಿದೆ ಎಂದು ಐಎಂಡಿ ಅಧಿಕಾರಿಗಳು ಗಮನಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಬಿಸಿಗಾಳಿ ಅಲೆಯ ಪರಿಸ್ಥಿತಿಗಳ ಮುನ್ಸೂಚನೆ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಐಎಂಡಿಯ ಹಿರಿಯ ವಿಜ್ಞಾನಿ ಎ ಪ್ರಸಾದ್ ಮಾತನಾಡಿ, ಸದ್ಯ ಬೆಂಗಳೂರಿನ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಇದೆ. ಮಾರ್ಚ್ ತಿಂಗಳಿಗೂ ಮುನ್ನ ಮತ್ತಷ್ಟು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

ಸಾಂದರ್ಭಿಕ ಚಿತ್ರ

'ಬೆಂಗಳೂರಿನಲ್ಲಿ, ಕಳೆದ ಕೆಲವು ದಿನಗಳಿಂದ ತಾಪಮಾನವು ಸಾಮಾನ್ಯ ಮಟ್ಟದಲ್ಲಿದೆ ಮತ್ತು ಸಾಮಾನ್ಯ ಮಟ್ಟಕ್ಕೆ ತಲುಪಿದೆ. ಮೋಡ ಕವಿದ ವಾತಾವರಣ ಮತ್ತು ಗಾಳಿಯ ಅಬ್ಬರವೇ ಇದಕ್ಕೆ ಕಾರಣವಾಗಿದ್ದು, ಇದಕ್ಕೂ ಮೊದಲು, ತಾಪಮಾನವು ಸಾಮಾನ್ಯಕ್ಕಿಂತ 1-1.2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಿತ್ತು. ಕನಿಷ್ಠ ತಾಪಮಾನವೂ ಏರಿಕೆಯಾಗುತ್ತಿದೆ'.

ಈಗ, ತಾಪಮಾನವು ಮತ್ತೆ ಏರಲು ಪ್ರಾರಂಭಿಸಿದೆ ಮತ್ತು ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ತಾಪಮಾನವು ಸ್ಥಳೀಯ ಇತರ ಅಂಶಗಳಿಂದ ಮಾತ್ರವಲ್ಲದೆ ಎಲ್ ನಿನೊ ಪರಿಣಾಮದಿಂದಲೂ ಹೆಚ್ಚುತ್ತಿದೆ. ಇದರಿಂದಾಗಿ ಹಿಂದಿನ ವರ್ಷದ ಫೆಬ್ರುವರಿ ತಿಂಗಳಿಗೆ ಹೋಲಿಸಿದರೆ ಈ ಬಾರಿ ತಾಪಮಾನ ಹೆಚ್ಚಿರುತ್ತದೆ ಎಂದು ಪ್ರಸಾದ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ