ಸಂಗ್ರಹ ಚಿತ್ರ 
ರಾಜ್ಯ

ಹಾವೇರಿ: ಲಾರಿ ಡಿಕ್ಕಿ; ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ದೇಹ ಛಿದ್ರ ಛಿದ್ರ; ಮಗುವಿನ‌‌ ಸ್ಥಿತಿ ಗಂಭೀರ

ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹಾವೇರಿ: ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದರು. ಮೊಟೇಬೆನ್ನೂರು ಬಳಿ ವೇಗವಾಗಿ ಬಂದ ಲಾರಿ ಬೈಕ್ ಗೆ ಹಿಂಬದಿಯಿಂದ ಗುದ್ದಿದ್ದು ಅಲ್ಲದೆ ಅವರ ದೇಹಗಳ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹೆಣ್ಣು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿದೆ. ಮೃತರನ್ನು ಹಾವೇರಿಯ ನಾಗೇಂದ್ರನಮಟ್ಟಿ ನಿವಾಸಿಗಳಾದ 34 ವರ್ಷದ ಆಸೀಫ್‌ವುಲ್ಲಾ ಮಲ್ಲಾಡದ, 27 ವರ್ಷದ ಅಫ್ರಿನ್‌ಬಾನು ಮಲ್ಲಾಡದ ಹಾಗೂ 6 ವರ್ಷದ ಪುತ್ರ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT