ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್  
ರಾಜ್ಯ

'ಪಾಕಿಸ್ತಾನ ಜಿಂದಾಬಾದ್ ಘೋಷಣೆ': ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಹೇಳಿದ್ದೇನು?

ನನಗೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಸಲಿಲ್ಲ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆದ್ದ ಮೂವರು ಅಭ್ಯರ್ಥಿಗಳ ಅಭಿಮಾನಿಗಳು ನಿನ್ನೆ ವಿಧಾನಸೌಧ ಕಾರಿಡಾರ್ ನಲ್ಲಿ ಸಂಭ್ರಮಾಚರಣೆ ನಡೆಸಿದ್ದು, ಈ ವೇಳೆ ಸೈಯದ್ ನಾಸೀರ್ ಹುಸೇನ್ ಅವರ ಅನುಯಾಯಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಬಗ್ಗೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿರುವ ನೂತನ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್, ಇಂದು ನಾವು ಮೂವರು ಅಭ್ಯರ್ಥಿಗಳ ಗೆಲುವನ್ನು ನಮ್ಮ ಕಾರ್ಯಕರ್ತರು ಸಂಭ್ರಮಿಸುತ್ತಿದ್ದರು. ನಾನು ಕೂಡ ಅವರ ಮಧ್ಯೆ ಇದ್ದೆ. 'ನಾಸಿರ್ ಹುಸೇನ್ ಜಿಂದಾಬಾದ್','ನಾಸಿರ್ ಸಾಬ್ ಜಿಂದಾಬಾದ್', 'ನಾಸಿರ್ ಖಾನ್ ಜಿಂದಾಬಾದ್', 'ಕಾಂಗ್ರೆಸ್ ಪಾರ್ಟಿ ಜಿಂದಾಬಾದ್' ಎಂದು ಅಭಿಮಾನಿಗಳು ಸಾಕಷ್ಟು ಘೋಷಣೆ ಕೂಗುತ್ತಿದ್ದರು.

ನಂತರ ನಾನು ಮನೆಗೆ ಹೋಗಲು ಸಿದ್ಧವಾದಾಗ ಮಾಧ್ಯಮ ಪ್ರತಿನಿಧಿಗಳಿಂದ ನಿಮ್ಮ ಅಭಿಮಾನಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಿ ಕರೆ ಮಾಡಿದರು. ನನಗೆ ಸಂಭ್ರಮಾಚರಣೆ ಮಧ್ಯೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಸಲಿಲ್ಲ ಎಂದು ಹೇಳಿದ್ದಾರೆ.

ಪೊಲೀಸರು ತನಿಖೆ ಮಾಡಲಿ: ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ, ಪೊಲೀಸ್ ದೂರು ಕೂಡ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಲಿ, ಯಾರಾದರೂ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಅಥವಾ ದುರುದ್ದೇಶದಿಂದ ಆಡಿಯೊ ಮತ್ತು ವಿಡಿಯೊವನ್ನು ತಿರುಚಿದ್ದಾರೆಯೇ ಎಂಬ ಬಗ್ಗೆ ಕೂಡ ಸೂಕ್ತ ತನಿಖೆಯಾಗಬೇಕು, ಘೋಷಣೆ ಕೂಗಿದವರು ಹೇಗೆ ಅಲ್ಲಿಗೆ ಬಂದರು, ಅವರ ಹಿನ್ನೆಲೆಯೇನು ಎಂಬ ಬಗ್ಗೆ ಕೂಡ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT