ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ 
ರಾಜ್ಯ

ಮೆಟ್ರೋದಲ್ಲಿ ರೈತನಿಗೆ ಪ್ರವೇಶ ನಿರಾಕರಣೆ: ಸರ್ಕಾರ, ಬಿಎಂಆರ್ ಸಿಎಲ್ ಗೆ NHRC ನೋಟಿಸ್

ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ರಾಜ್ಯ ಸರ್ಕಾರ ಮತ್ತು ಬಿಎಮ್​ಆರ್​ಸಿಎಲ್​ಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಬಟ್ಟೆ ಗಲೀಜು ಎಂಬ ಕಾರಣಕ್ಕೆ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ರಾಜ್ಯ ಸರ್ಕಾರ ಮತ್ತು ಬಿಎಮ್​ಆರ್​ಸಿಎಲ್​ಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ಸೋಮವಾರ ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರಿಗೆ ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಈ ಸಂಬಂಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿರುವ ಎನ್ಎಚ್ ಆರ್ ಸಿ, ವ್ಯಕ್ತಿಯ ಬಟ್ಟೆಯ ಆಧಾರದ ಮೇಲೆ ಸಾರ್ವಜನಿಕ ಸಾರಿಗೆಯಲ್ಲಿ ಅವಕಾಶ ನಿರಾಕರಣೆ ಮಾಡುವಂತಿಲ್ಲ. ಆ ರೀತಿಯಾದರೆ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ಬಗ್ಗೆ ವರದಿ ನೀಡುವಂತೆ ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದ್ದು, ನಾಲ್ಕು ವಾರದಲ್ಲಿ ಘಟನೆ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದೆ.

ಈ ಮಧ್ಯೆ, ಬಟ್ಟೆ ಕ್ಲೀನ್ ಇಲ್ಲವೆಂದು ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!