ಸಭಾಪತಿ ಬಸವರಾಜ ಹೊರಟ್ಟಿ(ಸಂಗ್ರಹ ಚಿತ್ರ) 
ರಾಜ್ಯ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಸಭಾಪತಿಗಳ ಮುಂದೆ ಕೈ ಕೈ ಮಿಲಾಯಿಸಲು ಮುಂದಾದ ಸದಸ್ಯರು

ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ ಎಂಬ ಆರೋಪ ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಬೆಂಗಳೂರು: ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ ಎಂಬ ಆರೋಪ ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಇಂದು ವಿಧಾನಪರಿಷತ್ತಿನಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿದರು. ಪಾಕಿಸ್ತಾನ ಪರ ಘೋಷಣೆ ಹಾಕಿರುವ ವಿಚಾರವನ್ನು ಪರಿಷತ್​ ಸದಸ್ಯ ಎನ್​ ರವಿಕುಮಾರ್​​ ಪ್ರಸ್ತಾಪಿಸಿ ಇದು “ದೇಶದ್ರೋಹಿ ಸರ್ಕಾರ” ಎಂದರು.

ಪದ ಬಳಕೆಯಿಂದ ಕೆರಳಿದ ಕಾಂಗ್ರೆಸ್​​​ ಸದಸ್ಯ ಅಬ್ದುಲ್ ಜಬ್ಬಾರ್ “ಅವನ ಬಾಯಿ ಬಂದ್ ಮಾಡಿ” ಎಂದು ರವಿಕುಮಾರ್​ ಅವರ ಮೇಲೆ ಏಕವಚನ ಪ್ರಯೋಗ ಮಾಡಿದರು. ಇದರಿಂದ ವಿಧಾನಪರಿಷತ್‌ನಲ್ಲಿ ಗದ್ದಲ ಜೋರಾಯಿತು. ಅಬ್ದುಲ್ ಜಬ್ಬಾರ್ ಮಾತಿಗೆ ರೊಚ್ಚಿಗೆದ್ದ ಬಿಜೆಪಿ ಸದಸ್ಯರು ಏಕವಚನದಲ್ಲಿ ಮಾತಾಡಿದರೆ ಸರಿ ಇರಲ್ಲವೆಂದರು. ಬಳಿಕ ರವಿಕುಮಾರ್ ಎದ್ದು ಅಬ್ದುಲ್​ ಜಬ್ಬರ್​ ಬಳಿ ಹೋದರು. ರವಿಕುಮಾರ್ ಜೊತೆ ತುಳಸಿ ಮುನಿರಾಜುಗೌಡ ಮುನ್ನುಗ್ಗಿ ಹೋದರು. ಎರಡೂ ಕಡೆಯ ಸದಸ್ಯರು ಸಭಾಪತಿಗಳ ಮುಂದೆಯೇ ಕೈಕೈ ಮಿಲಾಯಿಸಲು ಮುಂದಾದರು.

ಪರಿಸ್ಥಿತಿ ನಿಯಂತ್ರಿಸಿದ ಮಾರ್ಷಲ್ ಗಳು: ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮಾರ್ಷಲ್‌ಗಳು ಹರಸಾಹಸಪಟ್ಟರು. ಮಧ್ಯ ಪ್ರವೇಶಿಸಿದ ಸಚಿವ ಹೆಚ್‌.ಕೆ.ಪಾಟೀಲ್‌ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಕ್ಷಮೆ ಕೇಳುವಂತೆ ಸಲಹೆ ನೀಡರು. ಇದಕ್ಕೆ ಎನ್​. ರವಿಕುಮಾರ್​ ದೇಶದ ಪರವಾಗಿ ಮಾತನಾಡಿದ್ದೇನೆ, ಅದು ಕ್ಷಮೆ ಕೇಳುವ ವಿಷಯವಾ ಎಂದರು. ಇತ್ತ ಅಬ್ದುಲ್ ಜಬ್ಬಾರ್ ನಿಮ್ಮ ಮೂಲಕ ನಾನು ಆಡಿದ ಮಾತು ವಾಪಸ್ ಪಡೆಯುತ್ತೇನೆ ಎಂದು ಹೇಳಿದಾಗ ಪರಿಸ್ಥಿತಿ ತಿಳಿಯಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel