ಎನ್.ಎಸ್.ಭೋಸರಾಜು 
ರಾಜ್ಯ

ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ, ಬಿಜೆಪಿ ಕೆರಳುವುದು ಖಚಿತ!

ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ.

ಬೆಂಗಳೂರು: ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ.

ಜವಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ ಹಾಗೂ ಕಲ್ಪನೆ ಬೆಳೆಸುವುದು ಈ ಲ್ಯಾಬ್ ನ ಉದ್ದೇಶ. ವಿದ್ಯಾರ್ಥಿಗಳ ಕಲಿಕೆ ಇನ್ನಷ್ಟು ಪರಿಣಾಮಕಾರಿಯಾಗಿರಲು ಮತ್ತೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಯೋಗಿಕವಾಗಿ ಚರ್ಚಿಸಲು, ಸಂಶೋಧಿಸಲು ಹಾಗೂ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇದು ಪ್ರೇರೇಪಿಸಲಿದೆ. 21ನೇ ಶತಮಾನದ ಕೌಶಲ್ಯಗಳ ಕಲಿಕೆಗೆ ಅನುವು ಮಾಡಿಕೊಡುವ ಪಠ್ಯಕ್ರಮವನ್ನು ಇದರಲ್ಲಿ ಅಳವಡಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ನೆಹರು ಸ್ಟ್ರೀಮ್ ಲ್ಯಾಬ್ಸ್ ಪ್ರಾಯೋಗಿಕ ಅನುಭವವನ್ನು ಮತ್ತು ವಿವಿಧ ಕೌಶಲ್ಯಗಳಲ್ಲಿ ಪ್ರಾವೀಣ್ಯತೆ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತದೆ. ವಿಜ್ಞಾನ, ತಂತ್ರಜ್ಞಾನ, ರೊಬೊಟಿಕ್ಸ್, ಪರಿಸರ ಮತ್ತು ಪರಿಸರ ವಿಜ್ಞಾನ, ಖಗೋಳಶಾಸ್ತ್ರ ಮತ್ತು ಗಣಿತ ವಿಷಯಗಳ ಅಂತರಶಿಸ್ತೀಯ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಉಪಕರಣಗಳು ಮತ್ತು ಸಲಕರಣೆಗಳೊಂದಿಗೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT