ವಿಧಾನಮಂಡಲ ಅಧಿವೇಶನ (ಸಂಗ್ರಹ ಚಿತ್ರ) 
ರಾಜ್ಯ

ವಿಧಾನಮಂಡಲ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಫೆಬ್ರವರಿ 12 ರಿಂದ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಗುರುವಾರ ತೆರೆ ಬಿದ್ದಿದೆ. ವಿಧಾನ ಮಂಡಲದ ಉಭಯ ಸದನಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಬೆಂಗಳೂರು: ಫೆಬ್ರವರಿ 12 ರಿಂದ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಗುರುವಾರ ತೆರೆ ಬಿದ್ದಿದೆ. ವಿಧಾನ ಮಂಡಲದ ಉಭಯ ಸದನಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಉಭಯ ಸದನಗಳಲ್ಲಿ ಉತ್ತರ ನೀಡಿದರು. ಧನ ವಿನಿಯೋಗ ಮಸೂದೆಗಳಿಗೆ ಒಪ್ಪಿಗೆ ಪಡೆದ ಬಳಿಕ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಒಟ್ಟು 13 ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಸುಮಾರು 60 ಗಂಟೆ 10 ನಿಮಿಷಗಳ ಕಾಲ ಕಲಾಪ ನಡೆಸಲಾಗಿದೆ.

ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ್ದು, ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ 12 ಸದಸ್ಯರು ಒಟ್ಟು 10 ಗಂಟೆ 17 ನಿಮಿಷಗಳ ಕಾಲ ಭಾಗವಹಿಸಿ ಚರ್ಚಿಸಿದ್ದಾರೆ. ವಂದನಾ ನಿರ್ಣಯದ ಪ್ರಸ್ತಾವವನ್ನು ಫೆ.20ರಂದು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಪ್ರಕಟಿಸಿದರು.

ಒಟ್ಟು 43 ಅಧಿಸೂಚನೆಗಳು ಮತ್ತು 162 ವಾರ್ಷಿಕ ವರದಿಗಳು, 163 ಲೆಕ್ಕ ಪರಿಶೋಧನಾ ವರದಿಗಳು, 4 ಅನುಪಾಲನ ವರದಿಗಳು, 6 ಅನುಸರಣಾ ವರದಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ