ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ 
ರಾಜ್ಯ

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಅಮಾನತಿಗೆ ಸಿಎಟಿ ತಡೆಯಾಜ್ಞೆ

ಗೋಕಾಕ್‌ನ ಘಟಪ್ರಭಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಒ) ಹುದ್ದೆಯಿಂದ ಐಎಫ್‌ಎಸ್ ಅಧಿಕಾರಿ ಶಿವಾನಂದ ನಾಯಿಕವಾಡಿ ಅವರನ್ನು ಅಮಾನತುಗೊಳಿಸಿದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದೆ.

ಬೆಂಗಳೂರು: ಗೋಕಾಕ್‌ನ ಘಟಪ್ರಭಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಒ) ಹುದ್ದೆಯಿಂದ ಐಎಫ್‌ಎಸ್ ಅಧಿಕಾರಿ ಶಿವಾನಂದ ನಾಯಿಕವಾಡಿ ಅವರನ್ನು ಅಮಾನತುಗೊಳಿಸಿದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದೆ.

“ಮುಖ್ಯ ಕಾರ್ಯದರ್ಶಿಗಳು ಫೆಬ್ರವರಿ 21, 2024ರಂದು ಹೊರಡಿಸಿರುವ ಸರ್ಕಾರಿ ಆದೇಶವನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ತಡೆಹಿಡಿಯಲಾಗಿದೆ” ಎಂದು ನ್ಯಾಯಾಂಗ ಸದಸ್ಯೆ ನ್ಯಾಯಮೂರ್ತಿ ಎಸ್ ಸುಜಾತಾ ಮತ್ತು ಆಡಳಿತಾತ್ಮಕ ಸದಸ್ಯ ರಾಕೇಶ್ ಕುಮಾರ್ ಗುಪ್ತಾ ಅವರನ್ನೊಳಗೊಂಡ ಪೀಠವು ಆದೇಶಿಸಿದ್ದು, ಆದೇಶ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ,

ತಮ್ಮ ಅಮಾನತು ಪ್ರಶ್ನಿಸಿ ಶಿವಾನಂದ ನಾಯಿಕವಾಡಿ ಅವರು ಸಿಎಟಿ ಮೊರೆ ಹೋಗಿದ್ದರು. ಅರ್ಜಿಯಲ್ಲಿ ಕೆಲ ಗುತ್ತಿಗೆದಾರರು ರಾಯಭಾಗ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತ ನಿರ್ಮಾಣ ಮಾಡಿದ್ದರು. ಈ ಸಂಬಂಧ ಪ್ರಬಲ ವ್ಯಕ್ತಿಗಳನ್ನು ಸಂಪರ್ಕಿಸಿ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದರು. ಅಕ್ರಮ ನಿರ್ಮಾಣಕ್ಕೆ ಅನುಮತಿ ನೀಡುವಂತೆ ವಿವಿಧ ವ್ಯಕ್ತಿಗಳಿಂದ ದೂರವಾಣಿ ಕರೆಗಳು ಬರುತ್ತಿದ್ದವು.

ದೂರವಾಣಿ ಕರೆ ಮಾಡುತ್ತಿದ್ದ ಕೆಲವರು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರ ರೀತಿಯಲ್ಲೇ ಮಾತನಾಡುತ್ತಿದ್ದರು. ಸಾಕಷ್ಟು ಬೆದರಿಕೆಗಳು ಬರುತ್ತಿದ್ದವು.

ಅದೇ ರೀತಿ ಜನವರಿ 8, 2024 ರಂದೂ ಕೂಡ ನನಗೆ ದೂರವಾಣಿ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ಇಂತಹವರೇ ಇರಬೇಕೆಂದು ಮಾತನಾಡಿದ್ದೆ. ಶಾಸಕರನ್ನು ಅವಮಾನಿಸುವ ಅಥವಾ ಬೆದರಿಕೆ ಹಾಕುವ ಯಾವುದೇ ಉದ್ದೇಶವಿರಲಿಲ್ಲ. ಆದರೆ, ಶಾಸಕರು ತಮ್ಮ ಫೋನ್‌ನಲ್ಲಿ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿ ಅವರ ನನ್ನ ವರ್ಚಸ್ಸನ್ನು ಹಾಳು ಮಾಡಿದ್ದಾರೆ.

ಶಾಸಕರು ಮುಖ್ಯಮಂತ್ರಿಗೆ ದೂರು ಸಲ್ಲಿಸಿದ ನಂತರ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನನಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಘಟನೆ ಬಗ್ಗೆ ಎಲ್ಲಾ ವಿವರಗಳನ್ನು ನೀಡಿದ್ದರೂ ನನ್ನನ್ನು ಅಮಾನತುಗೊಳಿಸಿದ್ದಾರೆಂದು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT