ರಾಜ್ಯಪಾಲ ತಾವರಚಂದ್ ಗೆಹ್ಲೋಟ್ 
ರಾಜ್ಯ

ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ; ರಾಜ್ಯಪಾಲರು ಅಂಕಿತ ಹಾಕುವರೇ?

ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ಗುರುವಾರ ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ.

ಬೆಂಗಳೂರು: ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ಗುರುವಾರ ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ. ಆದರೆ ರಾಜ್ಯಪಾಲರು ಈ ಮಸೂದೆಗೆ ಅಂಕಿತ ಹಾಕುವರೇ ಅಥವಾ ಇಲ್ಲವೇ? ಎಂಬುದು ಈಗ ಕುತೂಹಲ ಮೂಡಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ವಿಧೇಯಕ ಮಂಡಿಸಿ, ಮತ್ತೊಮ್ಮೆ ಪರ್ಯಾಲೋಚನೆ ಮಾಡಿ ಅಂಗೀಕಾರ ನೀಡುವಂತೆ ಕೋರಿದರು. ಪ್ರತಿಪಕ್ಷ ಸಭಾತ್ಯಾಗ ಮಾಡಿದ್ದರಿಂದ ಕೇವಲ ಆಡಳಿತ ಶಾಸಕರು ಮಾತ್ರ ಸದನದಲ್ಲಿದ್ದರು. ಸ್ಪೀಕರ್ ಯು.ಟಿ.ಖಾದರ್ ಅವರು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ, ಈ ತಿದ್ದುಪಡಿ ಮಸೂದೆಗೆ ಇಂದು ಎರಡನೇ ಬಾರಿ ಅಂಗೀಕಾರ ಪಡೆದುಕೊಂಡಿದೆ. ಈಗ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ ಮತ್ತು ರಾಜ್ಯಪಾಲರು ಸಹಿ ಹಾಕಿದ ನಂತರ ಅದು ಕಾನೂನಾಗಿ ಜಾರಿಗೆ ಬರುತ್ತದೆ.

ವಿಧಾನ ಪರಿಷತ್​ನಲ್ಲಿ ಬಹುಮತ ಹೊಂದಿರುವ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದಿಂದಾಗಿ ಈ ವಿಧೇಯಕ ತಿರಸ್ಕೃತಗೊಂಡಿತ್ತು. ಹೀಗಾಗಿ, ಸಂಸದೀಯ ನಿಯಮಾವಳಿಗಳಂತೆ ತಿರಸ್ಕೃತ ವಿಧೇಯಕವನ್ನು ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡರೆ ಅದಕ್ಕೆ ಪರಿಷತ್ ನಲ್ಲಿ ಅಂಗೀಕಾರ ಪಡೆಯುವ ಅಗತ್ಯ ಇಲ್ಲ. ಅದನ್ನು ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ.

ವಾರ್ಷಿಕ ಒಂದು ಕೋಟಿ ರೂ.ಗಳ ಆದಾಯ ಮೀರುವ ಹಿಂದೂ ದೇಗುಲಗಳು ತಮ್ಮ ಈ ಆದಾಯದ ಶೇ.10 ರಷ್ಟನ್ನು ಸರ್ಕಾರಕ್ಕೆ ಕೊಡಬೇಕು. ಹತ್ತು ಲಕ್ಷ ರೂ.ಗಳಿಂದ ಒಂದು ಕೋಟಿ ರೂ. ಒಳಗಿನ ಆದಾಯ ಹೊಂದಿರುವ ದೇಗುಲಗಳು ಶೇ.5ರಷ್ಟನ್ನು ನೀಡಬೇಕು ಎಂಬುದು ತಿದ್ದುಪಡಿ ವಿಧೇಯಕದ ಮುಖ್ಯಾಂಶ. ಆದ್ದರಿಂದಲೇ ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿಯಿಂದ ತೀವ್ರ ಪ್ರತಿರೋಧ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT