ವಿಧಾನಸಭೆ 
ರಾಜ್ಯ

ಪರಿಷತ್ತಿನಲ್ಲಿ ಸೋಲಾಗಿದ್ದ ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ!

ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ.

ಬೆಂಗಳೂರು: ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆ, 2024ನ್ನು ಈಗ ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ನಂತರ ಅದು ಕಾನೂನಾಗಿ ಪರಿಣಮಿಸುತ್ತದೆ.

ಫೆಬ್ರವರಿ 21 ರಂದು ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ ಫೆಬ್ರವರಿ 23 ರಂದು ಪ್ರತಿಪಕ್ಷಗಳು ಬಹುಮತ ಹೊಂದಿರುವ ಮೇಲ್ಮನೆಯಲ್ಲಿ ಧ್ವನಿ ಮತದಿಂದ ಮಸೂದೆಗೆ ಸೋಲಾಗಿತ್ತು.

ಗುರುವಾರ ವಿಧಾನಸಭೆಯಲ್ಲಿ ವಿಧೇಯಕವನ್ನು ಪ್ರಾಯೋಗಿಕವಾಗಿ ಮಂಡಿಸಿ ಮಾತನಾಡಿದ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಈ ಮಸೂದೆಯನ್ನು ವಿಧಾನಸಭೆಯಲ್ಲಿ ಈ ಹಿಂದೆಯೇ ಅಂಗೀಕರಿಸಲಾಗಿತ್ತು, ಆದರೆ ಮೇಲ್ಮನೆಯಲ್ಲಿ ಸೋಲಾಗಿತ್ತು. ಮತ್ತೊಮ್ಮೆ ಮಸೂದೆಯನ್ನು ಅಂಗೀಕರಿಸುವಂತೆ ವಿಧಾನಸಭೆಯಲ್ಲಿ ವಿನಂತಿಸುವುದಾಗಿ ಹೇಳಿದರು.

ನಂತರ ಸ್ಪೀಕರ್ ಯು ಟಿ ಖಾದರ್ ಮಸೂದೆಯನ್ನು ಮತಕ್ಕೆ ಹಾಕಿದರು ಮತ್ತು ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.'ಕರ್ನಾಟಕ ಸರ್ಕಾರದ ಗೆಜೆಟರ್ ಪ್ರಕಾರ ಮುಜರಾಯಿ' ಎಂಬುದು ಧಾರ್ಮಿಕ, ದತ್ತಿ ಉದ್ದೇಶಗಳಿಗಾಗಿ ಮತ್ತು ಧಾರ್ಮಿಕ, ದತ್ತಿ ಸಂಸ್ಥೆಗಳ ನಿರ್ವಹಣೆಗಾಗಿ ಸರ್ಕಾರದಿಂದ ಮಾಡಿದ ಅನುದಾನವನ್ನು ಸೂಚಿಸುತ್ತದೆ. ಧಾರ್ಮಿಕ ಮತ್ತು ದತ್ತಿ ಇಲಾಖೆಯು ಮುಜರಾಯಿ ಇಲಾಖೆ ಎಂದು ಜನಪ್ರಿಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT