ಬಿ.ಕೆ ಹರಿಪ್ರಸಾದ್ 
ರಾಜ್ಯ

ಹೇಳಿಕೆ ತಿರುಚಲಾಗಿದೆ, ಮಾಧ್ಯಮಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ: ಬಿಕೆ ಹರಿಪ್ರಸಾದ್

ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಮಾಧ್ಯಮಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆಂದು ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಮಾಧ್ಯಮಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆಂದು ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಅವರು ಗುರುವಾರ ಹೇಳಿದ್ದಾರೆ.

ವಿಧಾನ ಪರಿಷತ್'ನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಿನ್ನೆ ನಡೆದ ವಿಚಾರದಲ್ಲಿ ಕೆಲವು ಮಾಧ್ಯಮಗಳು ತಿರುಚಿ ಸುದ್ದಿ ಪ್ರಸಾರ ಮಾಡುತ್ತಿವೆ. ಇದು ಪರಿಷತ್ ಹಕ್ಕುಚ್ಯುತಿ ದಕ್ಕೆ ಆಗಲಿದೆ. ಹಾಗಾಗಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದು, ಇಂದು ಕೆಲ ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆಂದು ಹೇಳಿದರು.

ತಿರುಚಿದ ಸುದ್ದಿಯನ್ನು ಬಿಜೆಪಿಯವರು ತಮ್ಮ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಬಿಜೆಪಿಯ ಕೆಟ್ಟ ತಂತ್ರಗಳಿಗೆ ಕಡಿವಾಣ ಹಾಕಬೇಕಿದೆ. ನಾನು ನಿನ್ನೆ ಉತ್ತರ ನೀಡುವಾಗ, ಪಾಕಿಸ್ತಾನ ಬಿಜೆಪಿಗೆ ಶತ್ರು ರಾಷ್ಟ್ರ ಆಗಿರಬಹುದು. ಆದರೆ, ನೆರೆ ರಾಷ್ಟ್ರ ಎಂದು ಹೇಳಿದ್ದೆ. ಅದನ್ನು ಮಾಧ್ಯಮಗಳಲ್ಲಿ ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ, ಇದರ ವಿರುದ್ದ ನಾನು ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ತಿಳಿಸಿದರು.

ಪರಿಷತ್ತಿನಲ್ಲಿ ನಿನ್ನೆ ಮಾತನಾಡಿದ್ದ ಹರಿಪ್ರಸಾದ್ ಅವರು, ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ ರಾಷ್ಟ್ರ. ಬಿಜೆಪಿಯವರಿಗೆ ಪಾಕಿಸ್ತಾನ ಮತ್ತು ಮುಸ್ಲಿಂ ಎಂಬ ಎರಡು ವಿಷಯಗಳನ್ನು ಬಿಟ್ಟು ಬೇರೆ ಏನು ಮಾತನಾಡುವುದಕ್ಕೆ ಬರುವುದಿಲ್ಲ. ದೇಶದ ಶೇ.5ರಷ್ಟು ಜನರು ಪ್ರತಿದಿನ 46 ರೂಪಾಯಿಯಲ್ಲಿ ಜೀವನ ನಡೆಸುತ್ತಿರೋದರ ಬಗ್ಗೆ ಯಾರು ಮಾತನಾಡಲ್ಲ ಯಾಕೆ? ಚೀನಾ ನಾಲ್ಕೂವರೆ ಸಾವಿರ ಸೆಕ್ವೇರ್ ಮೀಟರ್ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದೆ. ಇಂತಹ ವಿಷಯಗಳ ಬಗ್ಗೆ ಮಾತನಾಡದ ಇವರು ಶತ್ರು ರಾಷ್ಟ್ರದ ಜೊತೆಗೆ ನಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಾರೆ. ಇವರ ಪ್ರಕಾರ ಶತ್ರು ರಾಷ್ಟ್ರ ಅಂದ್ರೆ ಪಾಕಿಸ್ತಾನ. ಅದು ನಮಗೆ ಶತ್ರು ರಾಷ್ಟ್ರ ಅಲ್ಲ. ನಮ್ಮ ಪಕ್ಕದಲ್ಲಿರೋ ರಾಷ್ಟ್ರ ಎಂದು ಹೇಳಿದ್ದರು.

ಸದ್ಯ ಬಿಕೆ ಹರಿಪ್ರಸಾದ್​ರ ಈ ಹೇಳಿಕೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿದೆ. ಹರಿಪ್ರಸಾದ್ ಹೇಳಿಕೆ ಸಂಪೂರ್ಣ ನಾಚಿಕೆಗೇಡು ಎಂದು ಅವರು ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ATM Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..': ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ, ರಿಕವರಿ ಹಣ ಏನಾಯ್ತು?

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ಖಾತೆ ಹಂಚಿದ ನಿತೀಶ್ ಕುಮಾರ್; 20 ವರ್ಷಗಳಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಗೃಹ ಖಾತೆ

ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ; ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

SCROLL FOR NEXT