ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸ ವರ್ಷಾಚರಣೆ ನಂತರ ಸ್ನೇಹಿತರಿಂದಲೇ 21 ವರ್ಷದ ಯುವಕನ ಹತ್ಯೆ

ಹೊಸ ವರ್ಷಾಚರಣೆ ನಂತರ ಸ್ನೇಹಿತರಿಂದಲೇ 21 ವರ್ಷದ ಯುವಕ ಹತ್ಯೆಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರು: ಹೊಸ ವರ್ಷಾಚರಣೆ ನಂತರ ಸ್ನೇಹಿತರಿಂದಲೇ 21 ವರ್ಷದ ಯುವಕ ಹತ್ಯೆಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಸೋಮವಾರ ಮುಂಜಾನೆ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 21 ವರ್ಷದ ಯುವಕನೊಬ್ಬ ತನ್ನ ಸ್ನೇಹಿತರಿಂದಲೇ ಕೊಲೆಯಾಗಿದ್ದಾನೆ. ಮೃತ ಯುವಕನನ್ನು ವಿಜಯ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ವಿಜಯ್ ವೆಲ್ಡರ್ ಆಗಿದ್ದ ಮತ್ತು ಈತ ಶ್ರೀನಿವಾಸನಗರ ನಿವಾಸಿ ಎನ್ನಲಾಗಿದೆ. ಆರೋಪಿಗಳು ಆತನನ್ನು ಕೊಂದ ನಂತರ ಶವವನ್ನು ಶ್ರೀನಿವಾಸನಗರ ಬಸ್ ನಿಲ್ದಾಣದ ಬಳಿ ಎಸೆದು ಹೋಗಿದ್ದಾರೆ ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ವಿಜಯ್ ತಮ್ಮ ಸ್ನೇಹಿತರೊಂದಿಗೆ ಶ್ರೀನಿವಾಸನಗರ 80 ಅಡಿ ರಸ್ತೆಯಲ್ಲಿ ಹೊಸ ವರ್ಷವನ್ನು ಆಚರಿಸಿದ್ದಾರೆ ಎನ್ನಲಾಗಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಟೋದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ಗೆಳೆಯರೊಂದಿಗೆ ಜಗಳವಾಗಿದೆ. ಈ ವೇಳೆ ಚಾಕು ಹಿಡಿದುಕೊಂಡಿದ್ದ ಗೆಳೆಯನೊಬ್ಬ ಆತನಿಗೆ ಇರಿದಿದ್ದಾನೆ. ಆರೋಪಿಗಳು ಚಲಿಸುತ್ತಿದ್ದ ಆಟೋದಿಂದ ಆತನನ್ನು ಹೊರಕ್ಕೆ ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅತಿಯಾದ ರಕ್ತಸ್ರಾವದಿಂದ ವಿಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹನುಮಂತನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT