ಗೃಹ ಸಚಿವ ಡಾ. ಜಿ ಪರಮೇಶ್ವರ 
ರಾಜ್ಯ

'ರಾಮರಾಜ್ಯ' ಎನ್ನುವುದು ಜಾಗತಿಕ ಮಾದರಿಯಾಗಿದೆ: ಸಿದ್ದರಾಮಯ್ಯ ಬಳಿಕ ವರಸೆ ಬದಲಿಸಿದ ಪರಮೇಶ್ವರ

ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃದು ಧೋರಣೆ ತಾಳಿರುವ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ ಅವರು, ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗಷ್ಟೇ ಸೀಮಿತವಾಗಿಲ್ಲ. ರಾಮರಾಜ್ಯ ಎನ್ನುವುದು ಜಾಗತಿಕ ಮಟ್ಟಕ್ಕೆ ಮಾದರಿಯೇ ಹೊರತು ಕ್ಷುಲ್ಲಕ ರಾಜಕಾರಣಕ್ಕಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃದು ಧೋರಣೆ ತಾಳಿರುವ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ ಅವರು, ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗಷ್ಟೇ ಸೀಮಿತವಾಗಿಲ್ಲ. ರಾಮರಾಜ್ಯ ಎನ್ನುವುದು ಜಾಗತಿಕ ಮಟ್ಟಕ್ಕೆ ಮಾದರಿಯೇ ಹೊರತು ಕ್ಷುಲ್ಲಕ ರಾಜಕಾರಣಕ್ಕಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ. ಇದು ನಮ್ಮ ಸಂವಿಧಾನದ ಆಧಾರವಾಗಿದೆ. ನಮ್ಮ ಸಂಸ್ಥಾಪಕರು ಸಂವಿಧಾನವನ್ನು ರೂಪಿಸಲು ಬಯಸಿದಾಗ, ನಾವು ರಾಮರಾಜ್ಯ ಮಾದರಿಯ ಸಾರವನ್ನು ತೆಗೆದುಕೊಂಡಿದ್ದೇವೆ. ಹಾಗಾಗಿ, ರಾಮರಾಜ್ಯ ಮಾದರಿಯು ಬಿಜೆಪಿ ಅಥವಾ ಸ್ಥಳೀಯ ಮಟ್ಟಕ್ಕೆ ಮಾತ್ರವಲ್ಲ, ಜಾಗತಿಕ ಮಾದರಿಯಾಗಿದೆ' ಎಂದು ನಾನು ಭಾವಿಸುತ್ತೇನೆ.

ಆದರೆ, ಸದ್ಯಕ್ಕೆ ಈ ವಿಚಾರದಲ್ಲಿ ಪಕ್ಷದ ನಿಲುವೇನು ಎಂಬುದು ಗೊತ್ತಿಲ್ಲ. ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಪಕ್ಷವು ಪಾಲ್ಗೊಳ್ಳಲು ನಿರ್ಧರಿಸಿದರೆ, ನಾವು ಖಂಡಿತವಾಗಿಯೂ ಹೋಗುತ್ತೇವೆ. ನಾವೇಕೆ ಹೋಗಬಾರದು? ಭಗವಾನ್ ರಾಮ ಕೇವಲ ಬಿಜೆಪಿಯ ದೇವರಲ್ಲ. ಅವರು ಎಲ್ಲರಿಗೂ ಪೂಜ್ಯರು ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪರಮೇಶ್ವರ, 'ಕಾಂಗ್ರೆಸ್‌ನಲ್ಲೂ ಹಿಂದೂಗಳಿದ್ದಾರೆ. ಬಿಜೆಪಿಯಲ್ಲಿರುವವರನ್ನು ಹಿಂದೂಗಳು ಮತ್ತು ಇತರ ಪಕ್ಷಗಳಲ್ಲಿರುವವರನ್ನು ಹಿಂದೂಗಳಲ್ಲದವರು ಎಂದು ವರ್ಗೀಕರಿಸುವುದು ತಪ್ಪು. ಭಾರತದ ಬಹುಪಾಲು ಜನಸಂಖ್ಯೆ ಹಿಂದೂಗಳದ್ದಾಗಿದೆ. ಈ ಬಹುಮತವು ಎಲ್ಲಾ ಪಕ್ಷಗಳಲ್ಲಿ ಪ್ರತಿಫಲಿಸುತ್ತದೆ. ಹಾಗಾಗಿ, ಭಗವಾನ್ ರಾಮ ಎಲ್ಲರಿಗೂ ಸೇರಿದವನು' ಎಂದು ಅವರು ಹೇಳಿದರು.

ಪರಮೇಶ್ವರ ಅವರ ಹೇಳಿಕೆಯನ್ನು ಸ್ವಾಗತಿಸಿದ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಕೊನೆಗೂ ಕಾಂಗ್ರೆಸ್‌ಗೆ ರಾಮನ ಮಹತ್ವ ಅರ್ಥವಾದಂತಿದೆ. ಕಾಂಗ್ರೆಸ್ ನಾಯಕರ ಮನ ಪರಿವರ್ತನೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT