ಎಸ್ ಪಿ ರಸ್ತೆಯ ದಯನೀಯ ಸ್ಥಿತಿಯಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಸಂಚಾರಕ್ಕೆ ಹರಸಾಹಸ ಪಡುವ ಸ್ಥಿತಿ 
ರಾಜ್ಯ

ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ ನೀಡಿ ಒಂದು ತಿಂಗಳಾದರೂ ದುರಸ್ತಿ ಕಾಣದ ಎಸ್ ಪಿ ರೋಡ್!

ರಾಜಧಾನಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಡಿಸೆಂಬರ್ 2 ರಂದು ನಡೆದ ತಮ್ಮ ನಗರ ಪ್ರದಕ್ಷಿಣೆ ವೇಳೆ ದಾಸಪ್ಪ ಆಸ್ಪತ್ರೆ ಪಕ್ಕದಲ್ಲಿರುವ ಪೈಲ್ವಾನ್ ಎಂ ಕೃಷ್ಣಾ ರಸ್ತೆಯ ರಸ್ತೆ ಗುಂಡಿಗಳನ್ನು ಸರಿಪಡಿಸಲು ಮತ್ತು ದುರಸ್ತಿ ಮಾಡಲು ಬಿಬಿಎಂಪಿಗೆ ಸೂಚಿಸಿದ್ದರು.

ಬೆಂಗಳೂರು: ರಾಜಧಾನಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಡಿಸೆಂಬರ್ 2 ರಂದು ನಡೆದ ತಮ್ಮ ನಗರ ಪ್ರದಕ್ಷಿಣೆ ವೇಳೆ ದಾಸಪ್ಪ ಆಸ್ಪತ್ರೆ ಪಕ್ಕದಲ್ಲಿರುವ ಪೈಲ್ವಾನ್ ಎಂ ಕೃಷ್ಣಾ ರಸ್ತೆಯ ರಸ್ತೆ ಗುಂಡಿಗಳನ್ನು ಸರಿಪಡಿಸಲು ಮತ್ತು ದುರಸ್ತಿ ಮಾಡಲು ಬಿಬಿಎಂಪಿಗೆ ಸೂಚಿಸಿದ್ದರು. ಅದಾಗಿ ಭರ್ತಿ ಒಂದು ತಿಂಗಳು ಕಳೆದರೂ ರಸ್ತೆಯ ಸ್ಥಿತಿ ಹಾಗೆಯೇ ಇದೆ. ಇಲ್ಲಿ ಕುತೂಹಲಕಾರಿ ವಿಷಯವೆಂದರೆ ಪಾಲಿಕೆ ಕೇಂದ್ರ ಕಚೇರಿಯು ಈ ಸ್ಥಳದಿಂದ ಕೆಲವೇ ನಿಮಿಷಗಳ ದೂರದಲ್ಲಿರುವುದು. 

ಎಸ್ಪಿ ರಸ್ತೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ ಧೋಕಾ, ಹೆಚ್ಚಿನ ದಟ್ಟಣೆಯಿಂದಾಗಿ ರಸ್ತೆಯು ದೀರ್ಘಕಾಲ ಕೆಟ್ಟ ಸ್ಥಿತಿಯಲ್ಲಿದೆ. ಹದಗೆಟ್ಟ ರಸ್ತೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. 

ಈ ಹಿಂದೆ ಅಧಿಕಾರಿಗಳಿಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಸಮಸ್ಯೆಯ ಬಗ್ಗೆ ಪರಿಶೀಲಿಸುವಂತೆ ನಾವು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದೇವೆ, ಆದರೆ ವಿಷಯವು ಬಗೆಹರಿದಿಲ್ಲ ಎಂದು ಧೋಕಾ ಹೇಳಿದರು. ದಕ್ಷಿಣ ವಿಭಾಗದ ಪ್ರಮುಖ ರಸ್ತೆಗಳ ಕಾರ್ಯಪಾಲಕ ಇಂಜಿನಿಯರ್ ಸಾವಿತ್ರಿ ಅಕ್ಕಿ, ಈ ರಸ್ತೆಗಳು ಬಿಬಿಎಂಪಿ ವಾರ್ಡ್‌ಗೆ ಬರುತ್ತವೆ. ಈಗ ಅಧಿಕಾರಿಗಳು ಪ್ರಮುಖ ರಸ್ತೆಗಳ ವಿಭಾಗವನ್ನು ಅದರ ಅಧೀನಕ್ಕೆ ತೆಗೆದುಕೊಳ್ಳುವಂತೆ ಪತ್ರ ಬರೆದು ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ಪ್ರಸ್ತಾಪಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT