ಲಕ್ಷ್ಮಣ ಸವದಿ 
ರಾಜ್ಯ

ಅಡ್ವಾಣಿಯವರಿಗೇ ಆಹ್ವಾನ ನೀಡಿಲ್ಲ, ನಾವ್ಯಾವ ಲೆಕ್ಕ? ರಾಮ ಮಂದಿರ ನಿರ್ಮಾಣಕ್ಕೆ ನಾನು 10 ಲಕ್ಷ ರು ನೀಡಿರುವೆ!

ರಾಮ ಮಂದಿರ ನಿರ್ಮಾಣಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಉದ್ಠಾಟನೆಗೆ ಅಹ್ವಾನ ನೀಡಿಲ್ಲ, ಅವರು ಬರದಾರದು ಅಂದರೆ ಬಿಜೆಪಿ ಅವರಿಗೆ ಎಲ್ಲಿ ನೈತಿಕತೆ ಇದೆ? ಇನ್ನೂ ನಾವು ಯಾವ ಲೆಕ್ಕ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪ್ರಶ್ನಿಸಿದ್ದಾರೆ.

ಬೆಂಗಳೂರು:  ರಾಮ ಮಂದಿರ ನಿರ್ಮಾಣಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಉದ್ಠಾಟನೆಗೆ ಅಹ್ವಾನ ನೀಡಿಲ್ಲ, ಅವರು ಬರದಾರದು ಅಂದರೆ ಬಿಜೆಪಿ ಅವರಿಗೆ ಎಲ್ಲಿ ನೈತಿಕತೆ ಇದೆ? ಇನ್ನೂ ನಾವು ಯಾವ ಲೆಕ್ಕ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟುಕೊಂಡು ಅದಕ್ಕೆ ಬಣ್ಣ ಕಟ್ಟಿ ರಾಜಕೀಯ ಮಾಡ್ತಾರೆ. ರಾಮಮಂದಿರ ಆಗೋಕೆ ಅಡ್ವಾಣಿ ಕಾರಣ. ಬಿಜೆಪಿ ಅವರು ಮೊದಲು ಹಿಂದೂ ಹಿಂದೂ.. ಅಧಿಕಾರ ಬಂದ ಮೇಲೆ ನಾವು ಮುಂದು, ನೀವು ಹಿಂದೆ ಅಂತಾರೆ. ಅಡ್ವಾಣಿ ಅವರನ್ನೇ ಬರಬೇಡಿ ಅಂದರೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ಕೊಡದೇ ಇರುವ ವಿಷಯ ದೊಡ್ಡದಲ್ಲ ಎಂದು ಕಾಲೆಳೆದಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ಸಿಎಂ, ಸಚಿವರಿಗೆ ಆಹ್ವಾನ ನೀಡದ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು, ರಾಮಮಂದಿರಕ್ಕೆ ಹಣ ಸಂಗ್ರಹ ಮಾಡುವಾಗ ಎಲ್ಲರೂ ನೆನಪು ಆದ್ರು. ರಾಮಮಂದಿರ ರೆಡಿ ಆದ ಮೇಲೆ ಯಾರ ನೆನಪು ಕೂಡ ಬರೊಲ್ಲ. ನಾನು ಕೂಡಾ ರಾಮಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ. ಕೊಟ್ಟಿದ್ದೇನೆ. ಸ್ಥಳೀಯ RSS ನಾಯಕರು ಹಣ ತೆಗೆದುಕೊಂಡು ಹೋಗಿದ್ದರು. ಆದರೆ ಈಗ ಯಾವುದಕ್ಕೂ ಆಹ್ವಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಲ್ಲಿ ಇತ್ತೀಚೆಗೆ ಒನ್ ಮ್ಯಾನ್ ಆರ್ಮಿ ರೀತಿ ಆಗಿದೆ, ನಮಗೆ ಯಾವುದಕ್ಕೂ ಆಹ್ವಾನ ನೀಡಿಲ್ಲ  ಎಂದು ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡದ್ದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT