ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ, ಸಾವಿನ ಕಾರಣ ನಿಗೂಢ

ಒಂದೇ ಮನೆಯಲ್ಲಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ನಗರದ ಹೊರ ವಲಯದಲ್ಲಿ ನಡೆದಿದೆ.

ಹಾಸನ: ಒಂದೇ ಮನೆಯಲ್ಲಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ನಗರದ ಹೊರ ವಲಯದಲ್ಲಿ ನಡೆದಿದೆ. ಮೃತರನ್ನು ತಾಯಿ ಶಿವಮ್ಮ (36) ಮತ್ತು ಅವರ 7 ವರ್ಷದ ಪುತ್ರಿ ಹಾಗೂ 9 ವರ್ಷದ ಮಗ ಎಂದು ಗುರುತಿಸಲಾಗಿದೆ

ಮೃತ ಶಿವಮ್ಮನಿಗೆ ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ದಾಂಪತ್ಯದಲ್ಲಿಯೂ ಯಾವುದೇ ಕಿರಿಕಿರಿ ಇರಲಿಲ್ಲ. ಗಂಡ ಹೆಂಡತಿ ಅನ್ಯೋನ್ಯವಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಶಿವಮ್ಮನ ಪತಿ ತುಮಕೂರಿನ ಬೇಕರಿವೊಂದರಲ್ಲಿ ಕೆಲಸ ಮಾಡಿಕೊಡಿದ್ದರು. ಗಂಡ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತುಮಕೂರಿನಲ್ಲಿ ಬೇಕರಿ ಕೆಲಸಕ್ಕೆಂದು ಒಂದು ತಿಂಗಳ ಹಿಂದೆ ಹೋಗಿದ್ದೆ. ಸೋಮವಾರ ಸಂಜೆ ವಿಡಿಯೋ ಕಾಲ್​ ಕಾಲ್​ ಮಾಡಿ ಹೆಂಡತಿ ಮಕ್ಕಳೊಂದಿಗೆ ಮಾತನಾಡಿದ್ದೇನೆ. ಇವತ್ತು ಕೋರ್ಟ್​ ನಲ್ಲಿ ಕೆಲಸವಿದ್ದ ಕಾರಣ ತುಮಕೂರಿನಿಂದ ಹಾಸನಕ್ಕೆ ಬರುತ್ತೇನೆ ಎಂದು ಹೇಳಿದ್ದೆ. ಆಚೆ ಕಡೆ ಹೋಗೋಣ ಎಂದು ಕೂಡ ಹೇಳಿದ್ದೆ.

ಹಾಸನಕ್ಕೆ ಬಂದ ಮೇಲೆ 3-4 ಬಾರಿ ಫೋನ್ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಮನೆ ಬಳಿಕ ಬಂದು ನೋಡಿದಾಗಲೂ ಯಾರೂ ಇರಲಿಲ್ಲ. ಎಲ್ಲಾ ಕಡೆ ಹುಡುಕಾಡಿದೆ, ಆದರೂ ಪತ್ತೆ ಆಗಲಿಲ್ಲ. ಮತ್ತೆ ಮನೆ ಹತ್ತಿರ ಬಂದಾಗ ಗ್ಯಾಸ್​ ವಾಸನೆ ಬಂತು. ಆದರೇ, ಬಾಗಿಲು ಮತ್ತು ಎಲ್ಲಾ ಕಿಟಕಿಗಳನ್ನು ಮುಚ್ಚಲಾಗಿತ್ತು. ಮನೆ ಬಾಗಿಲಿಗೆ ಬೀಗ ಹಾಕಿದ್ದರಿಂದ ಹೊರಗಡೆ ಹೋಗಿರಬಹುದು ಎಂದು ಮನೆ ಬಳಿ ಸ್ವಲ್ಪ ಹೊತ್ತು ಕಾದು ಕುಳಿತಿದ್ದೆ. ನಂತರ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಮೃತ ಶಿವಮ್ಮಳ ಪತಿ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

'ಅಸಹ್ಯಕರ' ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿನ ಮುಂದೆ 'Tr' ಬಳಸುವ ಅವಕಾಶ!