ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ

ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, 2017ರಲ್ಲಿ ದಾಖಲಾಗಿದ್ದ ಕೇಸ್​ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್​​ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.

ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಅನ್ನುವುದು ಸುಳ್ಳು. ಇದು ತಪ್ಪು, ದುರುದ್ದೇಶಪೂರಿತ ಸುದ್ದಿಯಾಗಿದೆ ಎಂದು ತಿಳಿಸಿದ್ದಾರೆ.

2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ವದಂತಿ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT