ಶಾಸಕ ವಿ.ಸುನಿಲ್ ಕುಮಾರ್ 
ರಾಜ್ಯ

ನಾನೂ ಕರಸೇವಕ, ನನ್ನನ್ನೂ ಬಂಧಿಸಿ: ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.

ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌‌

31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ್‌, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT