ಅರಣ್ಯ ಇಲಾಖೆ (ಸಂಗ್ರಹ ಚಿತ್ರ) 
ರಾಜ್ಯ

ಕೆಂಗೇರಿ: ಒತ್ತುವರಿಯಾಗಿದ್ದ 80 ಕೋಟಿ ರೂ ಮೌಲ್ಯದ 6.5 ಎಕರೆ ಪ್ರದೇಶ ಅರಣ್ಯ ಇಲಾಖೆ ವಶಕ್ಕೆ

ಕೆಂಗೇರಿಯ ಬಿಎಂ ಕಾವಲ್ ಗ್ರಾಮದಲ್ಲಿ ಒತ್ತುವರಿಯಾಗಿದ್ದ 6.5 ಎಕರೆಯಷ್ಟು ಪ್ರದೇಶವನ್ನು ಮರಳಿ ತನ್ನ ವಶಕ್ಕೆ ಪಡೆದಿದೆ. 

ಬೆಂಗಳೂರು: ಕೆಂಗೇರಿಯ ಬಿಎಂ ಕಾವಲ್ ಗ್ರಾಮದಲ್ಲಿ ಒತ್ತುವರಿಯಾಗಿದ್ದ 6.5 ಎಕರೆಯಷ್ಟು ಪ್ರದೇಶವನ್ನು ಮರಳಿ ತನ್ನ ವಶಕ್ಕೆ ಪಡೆದಿದೆ. 

ಸರ್ವೇ ನಂ.170 ರಲ್ಲಿ 80 ಕೋಟಿ ರೂಪಾಯಿ ಮೌಲ್ಯದ 6.5 ಎಕರೆ ಪ್ರದೇಶ ಒತ್ತುವರಿಯಾಗಿತ್ತು ಎಂದು ಇಲಾಖೆ ಮಾಹಿತಿ ನೀಡಿದೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬೆಂಗಳೂರು ವೃತ್ತದ ಅಧಿಕಾರಿಗಳು ಕಾರ್ಮಿಕರಿಗಾಗಿ ನಿರ್ಮಿಸಿದ ತಾತ್ಕಾಲಿಕ ಮನೆಗಳನ್ನು ನೆಲಸಮಗೊಳಿಸಿದರು. ಈ 6.5 ಎಕರೆ ಪ್ರದೇಶವನ್ನು ಮಧುಸೂಧನ್ ಸ್ವಾಮಿ ಅವರು ಒತ್ತುವರಿ ಮಾಡಿಕೊಂಡು ಅದನ್ನು ತೋಟವನ್ನಾಗಿ ಪರಿವರ್ತಿಸಿದ್ದರು. 

ಈ ಪ್ರಕರಣವು 2006 ರಿಂದ ವಿವಾದದಲ್ಲಿದೆ ಮತ್ತು 2017 ರಲ್ಲಿ ಎಸಿಎಫ್ ನ್ಯಾಯಾಲಯವು ಮೊದಲ ಬಾರಿಗೆ ತೆರವು ಕಾರ್ಯಾಚರಣೆ ಆದೇಶವನ್ನು ನೀಡಿತ್ತು. ಇದನ್ನು ಪ್ರಶ್ನಿಸಿ  ಸಿಸಿಎಫ್ ನ್ಯಾಯಾಲಯದ ಮೊರೆ ಹೋಗಲಾಗಿತ್ತು.

ಬುಧವಾರ ಅತಿಕ್ರಮಣ ಆಸ್ತಿಯನ್ನು ವಶಪಡಿಸಿಕೊಳ್ಳಲು ಪೊಲೀಸರೊಂದಿಗೆ 20 ಅರಣ್ಯ ಸಿಬ್ಬಂದಿಯ ತಂಡ ಸಜ್ಜುಗೊಂಡಿತ್ತು. ಅತಿಕ್ರಮಣದಾರನ ವಿರುದ್ಧ ವಿವಿಧ ಅರಣ್ಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ. "ಕಾಗದದಲ್ಲಿ 6.5 ಎಕರೆ ಎಂದು ನಮೂದಿಸಿದ್ದರೂ, ವಾಸ್ತವದಲ್ಲಿ ನಾವು ಸುಮಾರು 7 ಎಕರೆಗಳನ್ನು ತೆರವುಗೊಳಿಸಿದ್ದೇವೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT