ಶ್ರೀಕಾಂತ್ ಪೂಜಾರಿ 
ರಾಜ್ಯ

ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು: ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ‌.  ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ.? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯ BJP ನಾಯಕರಿಗೆ ಮಾನ,ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ. ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ‌ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ.

ಅದರಂತೆ‌ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ, ಈ ವಿಚಾರ ತಿಳಿದಿದ್ದರೂ ರಾಜ್ಯ BJP ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT