ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ್ದ ಆರೋಪಿ ಬಂಧನ

ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳಗಾವಿ: ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಬಸುರ್ಟೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸಂತ್ರಸ್ತೆಯ ಮಕ್ಕಳು ಹಿಂದಿನ ದಿನ ಆರೋಪಿಯ ತೋಟದಿಂದ ಹೂವುಗಳನ್ನು ಕಿತ್ತಿದ್ದರು ಎಂಬ ನೆಪದಲ್ಲಿ ಆಕೆಯ ಮೂಗು ಕತ್ತರಿಸಿದ್ದಾನೆ.

ಸಂತ್ರಸ್ತೆಯನ್ನು ಸುಗಂಧಾ ಮೋರೆ (50) ಎಂದು ಗುರುತಿಸಲಾಗಿದ್ದು, ಆರೋಪಿಯು ಆಕೆಯೊಂದಿಗೆ ಜಗಳವಾಡಿ ಆಕೆಯ ಮೂಗು ಕತ್ತರಿಸಿದ್ದಾನೆ. ತೀವ್ರ ರಕ್ತಸ್ರಾವಗೊಂಡಿದ್ದ ಸುಗಂಧಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಖಡಕ್ ಸೂಚನೆ

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಟ್ರಂಪ್ ಯಿಂದ ಪಡೆಯಬೇಕಾ? ಶ್ವೇತಭವನ ಹೊರಗೆ ಪ್ರತಿಭಟಿಸಬೇಕಾ? ಕೇಂದ್ರದ ವಿರುದ್ಧ CM ಒಮರ್ ಅಬ್ದುಲ್ಲಾ ಕಿಡಿ

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

Weight...What!: 2, 6 ವರ್ಷದ ಪುಟಾಣಿ ಸಹೋದರಿಯರಿಂದ ಪವರ್‌ಲಿಫ್ಟಿಂಗ್‌ನಲ್ಲಿ ಹೊಸ ದಾಖಲೆ!

IPL 2027ಕ್ಕೂ ಮುನ್ನ ಕೊನೆಗೂ ಚೆನ್ನೈ ಸೂಪರ್ ಕಿಂಗ್ಸ್ ತೊರೆದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್!