ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಸಿಎಂ ಭೇಟಿ 
ರಾಜ್ಯ

ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಸಿಎಂ ಭೇಟಿ, ಜಾತಿಗಣತಿ ವರದಿ ಸ್ವೀಕರಿಸುವಂತೆ ಆಗ್ರಹ

ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಉಪ್ಪಾರ ಸಮುದಾಯದ ಭಗೀರಥ ಪೀಠದ ಡಾ. ಪುರುಷೋತ್ತಮನಾಂದಪುರಿ ಸ್ವಾಮೀಜಿ, ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ಹಾಗೂ ಇತರ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಜಾತಿ ಗಣತಿ ವರದಿ ನೀಡಲು ಎರಡು ತಿಂಗಳ ಕಾಲಾವಧಿ ವಿಸ್ತರಣೆಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದು ಸಿಎಂ, ಮಠಾಧೀಶರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು  ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರಿಗೆ ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT