ಸಂಗ್ರಹ ಚಿತ್ರ 
ರಾಜ್ಯ

ಶ್ರೀಕಾಂತ್ ಪೂಜಾರಿ ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನು ಉಲ್ಲಂಘಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ‌ ಇದ್ದಾರೆ. ಅವರು ನಿಮ್ಮ‌‌ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದರು.

ಇದೇ ವೇಳೆ ಶ್ರೀಕಾಂತ್ ಬಂಧಿಸಿದ ಪೊಲೀಸ್ ನನ್ನು ಅಮಾನತುಗೊಳಿಸಬೇಕೆಂಬ ಬಿಜೆಪಿ ಆಗ್ರಹ ಕುರಿತ ಪ್ರಶ್ನೆಗೆ ಉತ್ತರಿಸಿ, ಯಾವ ಕಾರಣಕ್ಕೆ ಮಾಡಬೇಕು? ಇನ್ಸ್ ಪೆಕ್ಟರ್ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡಿಲ್ಲ. ಅವರ ಕರ್ತವ್ಯವನ್ನು ಮಾತ್ರ ನಿಭಾಯಿಸಿದ್ದಾರೆ. ಶ್ರೀಕಾಂತ್ ಬಂಧನ ಕಾನೂನಿಗೆ ವಿರುದ್ಧವಲ್ಲವಾದ್ದರಿಂದ ಈ ವಿಚಾರವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

ಏನೇ ಆರೋಪ ಮಾಡುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಒಂದೇ ಪ್ರದೇಶದಲ್ಲಿ ಪತಿ-ಪತ್ನಿಯರನ್ನು ಪೊಲೀಸ್ ಇಲಾಖೆಯಲ್ಲಿ ನಿಯೋಜಿಸುವ ಕುರಿತ ವಿಚಾರವಾಗಿ ಮಾತನಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳು ಮತ್ತು ಇತರ ನಿಯಮಗಳು ಒಂದೇ ಜಿಲ್ಲೆಯಲ್ಲಿ ದಂಪತಿಗಳನ್ನು ನಿಯೋಜಿಸಬೇಕೆಂದು ಹೇಳುತ್ತವೆ. ಇದನ್ನು ಜಾರಿಗೆ ತರುವಂತೆ ಡಿಜಿಪಿಗೆ ಸೂಚಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT