ಸಂಗ್ರಹ ಚಿತ್ರ 
ರಾಜ್ಯ

ಶ್ರೀಕಾಂತ್ ಪೂಜಾರಿ ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನು ಉಲ್ಲಂಘಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ‌ ಇದ್ದಾರೆ. ಅವರು ನಿಮ್ಮ‌‌ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದರು.

ಇದೇ ವೇಳೆ ಶ್ರೀಕಾಂತ್ ಬಂಧಿಸಿದ ಪೊಲೀಸ್ ನನ್ನು ಅಮಾನತುಗೊಳಿಸಬೇಕೆಂಬ ಬಿಜೆಪಿ ಆಗ್ರಹ ಕುರಿತ ಪ್ರಶ್ನೆಗೆ ಉತ್ತರಿಸಿ, ಯಾವ ಕಾರಣಕ್ಕೆ ಮಾಡಬೇಕು? ಇನ್ಸ್ ಪೆಕ್ಟರ್ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡಿಲ್ಲ. ಅವರ ಕರ್ತವ್ಯವನ್ನು ಮಾತ್ರ ನಿಭಾಯಿಸಿದ್ದಾರೆ. ಶ್ರೀಕಾಂತ್ ಬಂಧನ ಕಾನೂನಿಗೆ ವಿರುದ್ಧವಲ್ಲವಾದ್ದರಿಂದ ಈ ವಿಚಾರವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

ಏನೇ ಆರೋಪ ಮಾಡುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಒಂದೇ ಪ್ರದೇಶದಲ್ಲಿ ಪತಿ-ಪತ್ನಿಯರನ್ನು ಪೊಲೀಸ್ ಇಲಾಖೆಯಲ್ಲಿ ನಿಯೋಜಿಸುವ ಕುರಿತ ವಿಚಾರವಾಗಿ ಮಾತನಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳು ಮತ್ತು ಇತರ ನಿಯಮಗಳು ಒಂದೇ ಜಿಲ್ಲೆಯಲ್ಲಿ ದಂಪತಿಗಳನ್ನು ನಿಯೋಜಿಸಬೇಕೆಂದು ಹೇಳುತ್ತವೆ. ಇದನ್ನು ಜಾರಿಗೆ ತರುವಂತೆ ಡಿಜಿಪಿಗೆ ಸೂಚಿಸಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel