ಸಂಗ್ರಹ ಚಿತ್ರ 
ರಾಜ್ಯ

ಮಾಲ್ ಆಫ್ ಏಷ್ಯಾ ಪ್ರಕರಣ: ಸಂಚಾರ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಪೊಲೀಸರ ಮಾಹಿತಿ

ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್‌ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.

ಬೆಂಗಳೂರು: ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್‌ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.

ಡಿಸೆಂಬರ್‌ 31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ದ್ವಿಚಕ್ರ ವಾಹನಗಳ ಪ್ರವೇಶ ಶುಲ್ಕ ಕಡಿತಗೊಳಿಸಲು ಸೂಚಿಸಲಾಗಿದೆ. ಕ್ಯಾಬ್, ಆಟೋಗಳ ಪಿಕಪ್, ಡ್ರಾಪ್ ಪಾಯಿಂಟ್ ಬದಲಾವಣೆ ಮಾಡಲಾಗಿದೆ. ಮಾಲ್‌ನ ಉದ್ಯೋಗಿಗಳ ವಾಹನ ಪಾರ್ಕಿಂಗ್‌ಗೆ ರಿಯಾಯಿತಿ ಪಾಸ್ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ಭದ್ರತಾ ಪರಿಶೀಲನಾ ಪಾಯಿಂಟ್ ಬದಲಾವಣೆ ಮಾಡಿ ಪ್ರೀಪೇಯ್ಡ್ ಆಟೋ ನಿಲ್ದಾಣ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಈ ವೇಳೆ ನ್ಯಾಯಾಲಯವು ಪರಿಹಾರ ಕ್ರಮಗಳ ಜಾರಿ ಬಗ್ಗೆ ಜನವರಿ 30ಕ್ಕೆ ವಿವರವಾದ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು. ಅಲ್ಲದೇ, ಅಲ್ಲಿಯವರೆಗೆ ಮಾಲ್ ಆಫ್ ಏಷ್ಯಾ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನೀಡಿದ್ದ ನಿರ್ದೇಶನವನ್ನು ಹೈಕೋರ್ಟ್ ವಿಸ್ತರಿಸಿತು.

ಕಳೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು “ನ್ಯಾಯಾಲಯದ ಸೂಚನೆಯಂತೆ ಮಾಲ್ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆದಿದೆ. ಮಾಲ್ ಪ್ರತಿನಿಧಿಗಳು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ. ಪೊಲೀಸ್ ಆಯುಕ್ತರು ಮಾಲ್‌ಗೆ ಭೇಟಿ ನೀಡಿ, ಶಬ್ದ ಮಾಲಿನ್ಯ, ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ” ಎಂದು ವಿವರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT