ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಹೋದ್ಯೋಗಿಯನ್ನು ಊಟಕ್ಕೆ ಕರೆದು, ಖಾಸಗಿ ಕಂಪನಿ ಮ್ಯಾನೇಜರ್ ನಿಂದ ಅತ್ಯಾಚಾರ

ಊಟಕ್ಕೆ ಕರೆದು ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಊಟಕ್ಕೆ ಕರೆದು ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

ಕೆಆರ್ ಪುರಂ ನಿವಾಸಿ ಸೈಯದ್ ಅಕ್ರಮ್ (37)  ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಂತ್ರಸ್ತೆ ಮತ್ತು ಅವರ ಪತಿ ಬಸವೇಶ್ವರನಗರದಲ್ಲಿರುವ ಸಂಸ್ಥೆಯಲ್ಲಿ ಟೆಲಿಕಾಲರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.

ಘಟನೆಯ ದಿನ ಮಹಿಳೆಯ ಪತಿ ಕುಟುಂಬದ ಸದಸ್ಯರ ಅಂತಿಮ ಸಂಸ್ಕಾರಕ್ಕಾಗಿ ತವರು ಮನೆಗೆ ಹೋಗಬೇಕಾಗಿತ್ತು ಹೀಗಾಗಿ ರಜೆ ತೆಗೆದುಕೊಂಡಿದ್ದರು. ಅಕ್ರಮ್ ಕರೆ ಮಾಡಿ ಆಕೆಯನ್ನು ಹೋಟೆಲ್‌ಗೆ ಊಟಕ್ಕೆ ಆಹ್ವಾನಿಸಿದರು, ಕಂಪನಿಯ  ಇತರ ಸಹೋದ್ಯೋಗಿಗಳು ಸಹ ಬರುತ್ತಾರೆ ಎಂದು ಹೇಳಿದ್ದಾನೆ.

ನಂತರ ಅಕ್ರಂ ಕಚೇರಿ ಬಳಿ ಬಂದು ಆಕೆಯನ್ನು ತನ್ನ ಬೈಕ್‌ನಲ್ಲಿ ತನ್ನ ಮನೆಗೆ ಕರೆದೊಯ್ದನು, ಅಲ್ಲಿ ಆತನ ಕುಟುಂಬ ಸದಸ್ಯರು ಇರಲಿಲ್ಲ ರೇಪ್ ಮಾಡಿದ ನಂತರ ನವರಂಗ್ ಸರ್ಕಲ್ ಬಳಿ ಆಕೆಯನ್ನು ಇಳಿಸಿ ಹೋಗಿದ್ದಾನೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ.

ಮಹಿಳೆ ಆಟೋದಲ್ಲಿ ಮನೆಗೆ ಹಿಂತಿರುಗಿ ಪತಿ ಹಿಂದಿರುಗುವವರೆಗೆ ಕಾಯುತ್ತಿದ್ದರು. ಮಂಗಳವಾರ ಪತಿ ಮನೆಗೆ ಬಂದು ನಡೆದ ವಿಷಯವನ್ನು ತಿಳಿಸಿದಾಗ ಮ್ಯಾನೇಜರ್ ವಿರುದ್ಧ ದೂರು ದಾಖಲಿಸಿದ್ದಾರೆ. ಕೂಡಲೇ ಕಚೇರಿ ಬಳಿ ಆರೋಪಿಯನ್ನು ಬಂಧಿಸಲಾಯಿತು. ಕಡ್ಡಾಯ ವೈದ್ಯಕೀಯ ಪರೀಕ್ಷೆಗಳ ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ