ಶ್ರೀಕಾಂತ್ ಪೂಜಾರಿ ಬಿಡುಗಡೆ 
ರಾಜ್ಯ

ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆ: ಹಿಂದೂ ಕಾರ್ಯಕರ್ತರಿಂದ ಸಂಭ್ರಮ

ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಹುಬ್ಬಳ್ಳಿ: ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಈ ವೇಳೆ ಅಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜೈಲಿನ ಹೊರಗೆ ಜಮಾಯಿಸಿ ಜಯ ಘೋಷ ಕೂಗಿದರು.

ಹಿಂದೂ ಕಾರ್ಯಕರ್ತರು ಪೂಜಾರಿ ಅವರ ಕೊರಳಿಗೆ ಹಾರ ಹಾಕಿ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದರು. ಬಂಧಿತ ಕರಸೇವಕನನ್ನು ಸ್ವಾಗತಿಸಲು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ, ಬಜರಂಗದಳ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ಮತ್ತು ಬಿಜೆಪಿ ಕಾರ್ಪೊರೇಟರ್‌ಗಳು ಜೈಲಿನ ಹೊರಗೆ ಹಾಜರಿದ್ದರು.

ಬಂಧನದಿಂದ ವಿಚಲಿತನಾಗಲ್ಲ ಜನವರಿ 19ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹೋಗುವುದಾಗಿ ಪೂಜಾರಿ ಹೇಳಿದರು. ರಾಮಜನ್ಮಭೂಮಿ ಆಂದೋಲನದ 31 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನ್ಯಾಯಾಲಯ ಪೂಜಾರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಘಟಕವು ರಾಜ್ಯಾದ್ಯಂತ ಸರಣಿ ಪ್ರತಿಭಟನೆಗಳನ್ನು ನಡೆಸಿತು. ಅಲ್ಲದೆ ಪೂಜಾರಿ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಪೂಜಾರಿ ಬಂಧನವು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT