ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ 19 ವರ್ಷದ ಯುವತಿಗೆ ಮಂಗನ ಕಾಯಿಲೆ!

19 ವರ್ಷದ ಯುವತಿಗೆ ಮಂಗನ ಕಾಯಿಲೆ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆ(ಕೆಎಫ್‌ಡಿ) ಪಾಸಿಟಿವ್ ಬಂದಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ.

ಶಿವಮೊಗ್ಗ: 19 ವರ್ಷದ ಯುವತಿಗೆ ಮಂಗನ ಕಾಯಿಲೆ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆ(ಕೆಎಫ್‌ಡಿ) ಪಾಸಿಟಿವ್ ಬಂದಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ. 

ಹೊಸನಗರ ತಾಲೂಕಿನ ಸಂಪೆಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕೆಎಫ್‌ಡಿ ಎರಡನೇ ಪ್ರಕರಣ ವರದಿಯಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರ ಪ್ರಕಾರ, 19 ವರ್ಷದ ಯುವತಿಗೆ ಕೆಎಫ್ ಡಿ ಪಾಟಿಸಿವ್ ಬಂದಿದ್ದು ಪ್ರಸ್ತುತ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಡಾ. ಸುರಗಿಹಳ್ಳಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಯುವತಿಯನ್ನು ಜನವರಿ 1ರಂದು ಮೆಕ್‌ಗನ್ ಆಸ್ಪತ್ರೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಿಸಲಾಗಿತ್ತು. ಆಕೆಗೆ ಹಿಮೋಗ್ಲೋಬಿನ್ ಮಟ್ಟ ಕಡಿಮೆ ಇತ್ತು. ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭದಲ್ಲಿ ಯುವತಿಗೆ ಕೆಡಿಎಫ್ ನೆಗೆಟಿವ್ ಬಂದಿತ್ತು. ಆದರೆ ಮೂರ್ನಾಲ್ಕು ದಿನಗಳ ನಂತರ ಆಕೆಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ ಎಂದು ಡಿಎಚ್‌ಒ ಹೇಳಿದರು.

ಬಾಲಕಿಯ ಸ್ಥಿತಿಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಆಕೆಯನ್ನು ಕೆಎಂಸಿ ಮಣಿಪಾಲಕ್ಕೆ ವರ್ಗಾಯಿಸಲಾಗಿದ್ದು, ವೈದ್ಯಕೀಯ ವೆಚ್ಚವನ್ನು ಆರೋಗ್ಯ ಇಲಾಖೆಯು ಭರಿಸುತ್ತಿದೆ. ಭಾನುವಾರ ಬಾಲಕಿಗೆ ಪ್ರಜ್ಞೆ ಬಂದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಡಾ. ಸುರಗಿಹಳ್ಳಿ ತಿಳಿಸಿದ್ದಾರೆ.

ಯುವತಿಯ ಸಹೋದರಿ ಡೆಂಗ್ಯೂಗೆ ಪಾಸಿಟಿವ್ ಬಂದಿದ್ದು ಪ್ರಸ್ತುತ ತೀರ್ಥಹಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಎಚ್‌ಒ ತಿಳಿಸಿದರು. ಈ ವರ್ಷ, ಇಲಾಖೆಯು ಕೆಡಿಎಫ್‌ಗಾಗಿ ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದೆ. ಕೇವಲ ಇಬ್ಬರು ವ್ಯಕ್ತಿಗಳಲ್ಲಿ ವೈರಸ್‌ ಪಾಸಿಟಿವ್ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶನಿವಾರ ಶಾಸಕಾಂಗ ಪಕ್ಷದ ಸಭೆ, ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಸೌದಿಯಲ್ಲಿ ಗಲ್ಲು ಶಿಕ್ಷೆ: 20 ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಕೇರಳ ವ್ಯಕ್ತಿ, 28 ದಿನಗಳಲ್ಲೇ ಬದಲಾದ ಬದುಕು, ಅತೀ ದೊಡ್ಡ ಕ್ರೌಡ್ ಫಂಡಿಂಗ್ ಅಭಿಯಾನ!

SCROLL FOR NEXT