ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದ ಸಚಿವ ಸಂತೋಷ್ ಲಾಡ್ 
ರಾಜ್ಯ

ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್; ಸಚಿವರ ನಡೆಗೆ ವ್ಯಾಪಕ ಮೆಚ್ಚುಗೆ

ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 

ಧಾರವಾಡ: ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 

ಧಾರವಾಡದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಸಂತೋಷ್ ಲಾಡ್ ಅವರು ಅಳ್ನಾವರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಕೆಲಗೇರಿ ಬಳಿ, ಮೂವರು ಯುವತಿಯರು ಮತ್ತು ಮೂವರು ಯುವಕರು ಅಪಘಾತಕ್ಕೀಡಾಗಿ ಸಹಾಯಕ್ಕಾಗಿ ಅಂಗಲಾಚುತ್ತಿರುವುದನ್ನು ಕಂಡಿದ್ದಾರೆ.

ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಸಂತೋಷ್ ಲಾಡ್ ಅವರು ತಮ್ಮ ಸಹಾಯಕರ ನೆರವಿನಿಂದ ಸಂತ್ರಸ್ತರನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆಯೂ ನೋಡಿಕೊಂಡಿದ್ದಾರೆ. ಸಚಿವರ ಈ ನಡೆಗೆ ಜನರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಂತೋಷ್ ಲಾಡ್ ಅವರು, ಅಳ್ನಾವರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಧಾರವಾಡಕ್ಕೆ ಮರಳುತ್ತಿದ್ದಾಗ ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ತಕ್ಷಣ ಅವರನ್ನು ನನ್ನ ವಾಹನದಲ್ಲೇ ಕರೆದೊಯ್ದು ಧಾರವಾಡ ಸಿವಿಲ್‌ ಆಸ್ಪತ್ರೆಗೆ ದಾಖಲಿಸಿದ್ದೇನೆ ಎಂದು ಬರೆದಿದ್ದಾರೆ. 

ಗಾಯಾಳುಗಳಿಗೆ ಧೈರ್ಯ ಹೇಳಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದ್ದೇನೆ ಎಂದಿದ್ದಾರೆ.  ಜೊತೆಗೆ ಸಂತ್ರಸ್ತರ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT