ಕೆಎಸ್ ಈಶ್ವರಪ್ಪ 
ರಾಜ್ಯ

ಮಂದಿರ ಕೆಡವಿ ಕಟ್ಟಲಾಗಿರುವ ಮಸೀದಿಗಳನ್ನು ನೀವೇ ಕೆಡವಿ, ಇಲ್ಲದಿದ್ದರೆ ಹಿಂದೂಗಳೇ ಕೆಡವುತಾರೆ: ಮುಸ್ಲಿಂರಿಗೆ ಈಶ್ವರಪ್ಪ

ಬಾಬ್ರಿ ಮಸೀದಿ ಇದ್ದ ಜಾಗದಲ್ಲಿ ಇಂದು ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದೇ ಜನವರಿ 22ರಂದು ರಾಮನ ಪ್ರಾಣ ಪ್ರತಿಷ್ಠಾಪನೆಯೂ ನಡೆಯುತ್ತಿದೆ. ಇನ್ನೊಂದು ವರ್ಷದಲ್ಲಿ ಮಥರಾ ಹಾಗೂ ಕಾಶಿ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಧ್ವಂಸಗೊಳ್ಳುತ್ತದೆ...

ಬೆಳಗಾವಿ: ಬಾಬ್ರಿ ಮಸೀದಿ ಇದ್ದ ಜಾಗದಲ್ಲಿ ಇಂದು ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದೇ ಜನವರಿ 22ರಂದು ರಾಮನ ಪ್ರಾಣ ಪ್ರತಿಷ್ಠಾಪನೆಯೂ ನಡೆಯುತ್ತಿದೆ. ಇನ್ನೊಂದು ವರ್ಷದಲ್ಲಿ ಮಥರಾ ಹಾಗೂ ಕಾಶಿ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಧ್ವಂಸಗೊಳ್ಳುತ್ತದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿಯ ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಮಾಡಿದ ಕೆಎಸ್ ಈಶ್ವರಪ್ಪ, ದೇವಸ್ಥಾನಗಳಲ್ಲಿ ಹಿಂದೂಗಳ ಜೀವವಿದೆ ಎಂದು ಮುಸ್ಲಿಂ ದೊರೆಗಳಿಗೆ ಗೊತ್ತಿತ್ತು. ಹೀಗಾಗಿ ಮಂದಿರಗಳನ್ನು ಕೆಡವಿದರೆ ಭಾರತ ನಮ್ಮದಾಗುತ್ತೆಂದು ಮುಸ್ಲಿಂ ದೊರೆಗಳು ಭಾವಿಸಿದ್ದರು. ಕಾಶಿ ವಿಶ್ವನಾಥನ ದೇವಸ್ಥಾನ ಮಥುರ ದೇವಸ್ಥಾನಗಳನ್ನು ಅರ್ಧ ಕೆಡವಿ ಮಸೀದಿ ನಿರ್ಮಿಸಿದ್ದರು. 

ರಾಮ ಜನಿಸಿದ್ದ ಜಾಗದಲ್ಲೇ ಇಂದು ಭವ್ಯ ರಾಮಮಂದಿರವನ್ನು ಕಟ್ಟುತ್ತಿದ್ದೇವೆ. ಇನ್ನೆರಡು ದೇವಸ್ಥಾನಕ್ಕೆ ಕೋರ್ಟ್ ಆದೇಶಿಸಿದೆ. ಇನ್ನೊಂದು ವರ್ಷದಲ್ಲಿ ಮಥುರಾ, ಕಾಶಿ ದೇಗುಲದ ಪಕ್ಕದಲ್ಲಿರುವ ಮಸೀದಿ ಧ್ವಂಸವಾಗುತ್ತದೆ. ಆ ಜಾಗದಲ್ಲಿ ದೇವಸ್ಥಾನವನ್ನು ಕಟ್ಟುತ್ತೇವೆ ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ಹಿಂದೂ, ಮುಸ್ಲಿಂರು ಸಹೋದರರಂತೆ ಇರಬೇಕು ಎಂಬುದು ನಮ್ಮ ಆಸೆ. ಹೀಗಾಗಿ ಎಲ್ಲೆಲ್ಲಿ ದೇವಸ್ಥಾನ ಕೆಡವಿ ಮಸೀದಿ ಕಟ್ಟಲಾಗಿದೆಯೋ ಅದನ್ನು ನೀವೆ ಕಿತ್ತು ಹಾಕಿ. ಇಲ್ಲವಾದರೆ ರಾಮಭಕ್ತರೆಲ್ಲರೂ ನಿಮ್ಮೆಲ್ಲಾ ಮಸೀದಿಗಳನ್ನು ಕಿತ್ತುಹಾಕುತ್ತಾರೆ. ಅಲ್ಲಿ ಮಂದಿರ ಕಟ್ಟೇ ಕಟ್ಟುತ್ತೇವೆ ಎಂದು ದೇಶದಲ್ಲಿ ಇರುವ ಮುಸಲ್ಮಾನರಿಗೆ ಹೇಳಲು ಇಷ್ಟ ಪಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT