ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಆನೆಗಳು ತುಂಬಿ ತುಳುಕುತ್ತಿವೆ, ಆದ್ರೂ ಬೇರೆ ರಾಜ್ಯಗಳಿಗೆ ಕೊಡಲು ಅರಣ್ಯ ಇಲಾಖೆ ಅಸಹಾಯಕ!

ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಮತ್ತು ಮಧ್ಯಪ್ರದೇಶದಂತಹ ಇತರ ರಾಜ್ಯಗಳಿಂದ ಕರ್ನಾಟಕದ ಆನೆಗಳಿಗೆ ಬೇಡಿಕೆ ಹೆಚ್ಚಿದೆ. ಆದರೆ ರಾಜ್ಯದಲ್ಲಿ ಆನೆಗಳು ತುಂಬಿ ತುಳುಕುತ್ತಿದ್ದರೂ, ಘರ್ಷಣೆ, ಸಮಸ್ಯೆಗಳು ಹೆಚ್ಚುತ್ತಿದ್ದರೂ ಅವುಗಳನ್ನು ಬಿಟ್ಟುಕೊಡುವ ಸ್ಥಿತಿಯಲ್ಲಿ...

ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಮತ್ತು ಮಧ್ಯಪ್ರದೇಶದಂತಹ ಇತರ ರಾಜ್ಯಗಳಿಂದ ಕರ್ನಾಟಕದ ಆನೆಗಳಿಗೆ ಬೇಡಿಕೆ ಹೆಚ್ಚಿದೆ. ಆದರೆ ರಾಜ್ಯದಲ್ಲಿ ಆನೆಗಳು ತುಂಬಿ ತುಳುಕುತ್ತಿದ್ದರೂ, ಘರ್ಷಣೆ, ಸಮಸ್ಯೆಗಳು ಹೆಚ್ಚುತ್ತಿದ್ದರೂ ಅವುಗಳನ್ನು ಬಿಟ್ಟುಕೊಡುವ ಸ್ಥಿತಿಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಇಲ್ಲ.

ಬೇಡಿಕೆಯಿದ್ದರೂ ನಾವು ಸೆರೆಹಿಡಿಯಲಾದ ಅಥವಾ ಮೃಗಾಲಯದ ಯಾವುದೇ ಆನೆಗಳನ್ನು ಬೇರೆ ರಾಜ್ಯಗಳಿಗೆ ನೀಡುತ್ತಿಲ್ಲ. ಕೊನೆಯದಾಗಿ ಅರಣ್ಯ ಇಲಾಖೆ ಮಠಗಳಲ್ಲಿ ನೀಡಿದ್ದ ಆನೆಗಳನ್ನು ಸಹ ಅಲ್ಲಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಅರಣ್ಯ ಇಲಾಖೆ ಅವುಗಳನ್ನು ರಕ್ಷಿಸಿ ಬೇರೆ ರಾಜ್ಯಗಳಿಗೆ ಒಪ್ಪಿಸಿತ್ತು’ ಎಂದು ಹೆಸರು ಹೇಳಲಿಚ್ಛಿಸದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಳೆದ ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾನವ-ಪ್ರಾಣಿ ಸಂಘರ್ಷ, ಅರಣ್ಯೀಕರಣ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆನೆಗಳನ್ನು ಸೆರೆಹಿಡಿಯಲು ಅಥವಾ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದಾಗ, ಸಭೆಯಲ್ಲಿದ್ದ ಅಧಿಕಾರಿಗಳು ಆನೆಗಳನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಸಚಿವರಿಗೆ ತಿಳಿಸಿದರು.

ಇಲಾಖೆಯ ದಾಖಲೆಗಳ ಪ್ರಕಾರ, ರಾಜ್ಯಾದ್ಯಂತ ವಿವಿಧ ಆನೆ ಶಿಬಿರಗಳಲ್ಲಿ 100 ಆನೆಗಳನ್ನು ಇರಿಸಲಾಗಿದ್ದು, ಅವುಗಳಲ್ಲಿ 30- 35 ಕುಮ್ಕಿ ಆನೆಗಳಾಗಿ ಬಳಸಬಹುದು (ಇತರ ಕಾಡು ಆನೆಗಳನ್ನು ಹಿಡಿಯಲು ಬಳಸಲಾಗುತ್ತದೆ). ಉಳಿದ ಆನೆಗಳನ್ನು ಶಿಬಿರಗಳಲ್ಲಿ ಇರಿಸಲಾಗಿದೆ.

“ನಮ್ಮ ಆನೆಗಳನ್ನು ಇತರ ರಾಜ್ಯಗಳಲ್ಲಿ ಕುಮ್ಕಿಗಳಾಗಿ ಬಳಸಲು ಬೇಡಿಕೆಯಿದೆ. ದೇಶದ ಇತರ ಪ್ರಾಣಿಸಂಗ್ರಹಾಲಯಗಳಿಂದಲೂ ಆನೆಗಳಿಗೆ ಬೇಡಿಕೆಯಿದೆ. ಆದರೆ, ಅರ್ಜುನ ಸಾವಿನ ಘಟನೆಯ ನಂತರ, ನಾವು ಆನೆ ಸ್ಥಳಾಂತರ ಕಾರ್ಯಾಚರಣೆಯನ್ನು ನಿಧಾನಗೊಳಿಸಿದ್ದೇವೆ. ರಕ್ಷಣಾ ಕೇಂದ್ರಗಳಲ್ಲಿ ಸ್ಥಳಾವಕಾಶವಿಲ್ಲದ ಕಾರಣ ಆನೆ ಸೆರೆ ಕಾರ್ಯಾಚರಣೆಯನ್ನೂ ಸ್ಥಗಿತಗೊಳಿಸಿದ್ದೇವೆ. ಸದ್ಯದ ಪರಿಸ್ಥಿತಿಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿದ್ದು, ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಅರ್ಜುನನ ಸಾವಿನ ನಂತರ ಸಂಘರ್ಷದಲ್ಲಿರುವ ಇತರ ಕಾಡು ಆನೆಗಳನ್ನು ಸೆರೆಹಿಡಿಯಲು ನಮಗೆ ಬಲಿಷ್ಠವಾದ ಬುಲ್ ಆನೆಗಳು ಬೇಕಾಗುತ್ತವೆ” ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT