ಆರ್ ಅಶೋಕ್ 
ರಾಜ್ಯ

ಕಟೌಟ್ ಗಳಿಗೆ ಸರ್ಕಾರ ನಿರ್ಬಂಧ ವಿಧಿಸಬೇಕು, ನಟರು ಸಹ ಎಚ್ಚರಿಕೆ ವಹಿಸಬೇಕು: ಆರ್ ಅಶೋಕ್

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಸಂದರ್ಭದಲ್ಲಿ ಕಟೌಟ್ ಕಟ್ಟಲು ಹೋಗಿದ್ದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಮೂವರು ಯುವಕರು ವಿದ್ಯುತ್ ತಂತಿ ತಲುಗಿ ಸಾವಿಗೀಡಾಗಿದ್ದು ಬಹಳ ನೋವಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಸಂದರ್ಭದಲ್ಲಿ ಕಟೌಟ್ ಕಟ್ಟಲು ಹೋಗಿದ್ದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಮೂವರು ಯುವಕರು ವಿದ್ಯುತ್ ತಂತಿ ತಲುಗಿ ಸಾವಿಗೀಡಾಗಿದ್ದು ಬಹಳ ನೋವಿನ ಸಂಗತಿ. ಇಂತಹ ಘಟನೆಗಳು ಆಗದಂತೆ ಸರ್ಕಾರ ಮತ್ತು ಚಿತ್ರನಟರು ಬಹಳ ಎಚ್ಚರಿಕೆಯನ್ನು ವಹಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಟರ ಬಗ್ಗೆ ಅಭಿಮಾನ ಇರಬೇಕು, ಆದರೆ ಅದು ಅತಿರೇಕವಾಗಿ ಪ್ರಾಣ ಕಳೆದುಕೊಳ್ಳುವ ಮಟ್ಟಕ್ಕೆ ಹೋಗಬಾರದು. ಈ ಬಗ್ಗೆ ನಟರು ಅಭಿಮಾನಿಗಳಿಗೆ ಮೊದಲೇ ತಿಳುವಳಿಕೆ, ಬುದ್ದಿಮಾತು ಹೇಳಬೇಕು. ನಟರ ಕಟೌಟ್ ಗಳನ್ನು ಎಷ್ಟು ಅಡಿ ಎತ್ತರಕ್ಕೆ ಹಾಕಬೇಕು, ಎಷ್ಟು, ಹೇಗೆ ಹಾಕಬೇಕು ಎಂದು ಸರ್ಕಾರ ಕೂಡ ನಿರ್ಬಂಧ ವಿಧಿಸಬೇಕು. ಇಂತಹ ಎಚ್ಚರಿಕೆಗಳನ್ನು ತಂದರೆ ದುರ್ಘಟನೆಗಳನ್ನು ತಪ್ಪಿಸಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT