ನಟ ದರ್ಶನ್ ಮತ್ತು ಪಬ್ ನ ಸಂಗ್ರಹ ಚಿತ್ರ 
ರಾಜ್ಯ

ಜೆಟ್ ಲ್ಯಾಗ್ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೊಟೀಸ್!

ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ಚಿತ್ರ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡು ಗಳಿಕೆಯಲ್ಲಿ 100 ಕೋಟಿ ಕ್ಲಬ್ ಸೇರಿದೆ. ವಿದೇಶದಲ್ಲಿ ಕೂಡ ಹವಾ ಎಬ್ಬಿಸಿದೆ. ಈ ಖುಷಿಯಲ್ಲಿ ಚಿತ್ರತಂಡ ಜನವರಿ 3ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಜೆಟ್ ಲ್ಯಾಗ್ ಪಬ್ ನಲ್ಲಿ ಸಕ್ಸಸ್ ಪಾರ್ಟಿ ಇಟ್ಟುಕೊಂಡಿತ್ತು. ಅದರಲ್ಲಿ ಚಿತ್ರದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ನಾಯಕ ನಟ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರು ಭಾಗಿಯಾಗಿದ್ದರು.

ಬಾರ್ ಅಂಡ್ ರೆಸ್ಟೋರೆಂಟ್ ಗೆ ವಿಧಿಸಿರುವ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಬಾಗಿಲು ಹಾಕಬೇಕು. ಆದರೆ ಚಿತ್ರತಂಡ ಮಧ್ಯರಾತ್ರಿ ಮೀರಿ ಬೆಳಗಿನ ಜಾವದವರೆಗೂ ಪಾರ್ಟಿ ಮಾಡಿದ್ದು ಪಾರ್ಟಿ ಮುಗಿಸಿಕೊಂಡು ಹೊರಬರುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ನಾಲ್ವರಿಗೆ ನೊಟೀಸ್: ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ಆರಂಭದಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರಿಂದ ನೋಟಿಸ್ ಜಾರಿ ಆಗಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ಸಹ ನೊಟೀಸ್ ನೀಡಲಾಗಿದೆ. ಸದ್ಯ ಚಿತ್ರತಂಡ ವಿದೇಶ ಪ್ರವಾಸದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT