ಹೆಚ್ ಡಿ ರೇವಣ್ಣ-ಹರ್ದಿಪ್ ಸಿಂಗ್ ಪುರಿ 
ರಾಜ್ಯ

ರಸ್ತೆ ಮಧ್ಯೆ ರೇವಣ್ಣರಿಂದ ಸನ್ಮಾನ: ಬೆಂಗಾವಲು ವಾಹನದ ಪೊಲೀಸರ ವಿರುದ್ಧ ಕೇಂದ್ರ ಸಚಿವ ಹರ್ದೀಪ್ ಗರಂ!

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟೂರು ಹರದನಹಳ್ಳಿ ಮಾರ್ಗವಾಗಿ ಹೋಗುವಾಗ ದೇವೇಗೌಡರ ನೂತನ ನಿವಾಸದೆದರು ನಿಂತಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಕಂಡು ಬೆಂಗಾವಲು ಪಡೆ ಪೊಲೀಸರು ವಾಹನವನ್ನು ನಿಲ್ಲಿಸಿದ್ದಕ್ಕೆ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಸಿಂಗ್ ಪುರಿ ಅವರು ಗರಂ ಆಗಿದ್ದಾರೆ.

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟೂರು ಹರದನಹಳ್ಳಿ ಮಾರ್ಗವಾಗಿ ಹೋಗುವಾಗ ದೇವೇಗೌಡರ ನೂತನ ನಿವಾಸದೆದರು ನಿಂತಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಕಂಡು ಬೆಂಗಾವಲು ಪಡೆ ಪೊಲೀಸರು ವಾಹನವನ್ನು ನಿಲ್ಲಿಸಿದ್ದಕ್ಕೆ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಸಿಂಗ್ ಪುರಿ ಅವರು ಗರಂ ಆಗಿದ್ದಾರೆ.

ಹಳೇಕೋಟೆ ಗ್ರಾಮದಲ್ಲಿ ಆಯೋಜನೆಗೊಂಡಿದ್ದ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ತೆರಳುತ್ತಿದ್ದರು. ಈ ವೇಳೆ ಹರದನಹಳ್ಳಿಯಲ್ಲಿ ಕಾದು ಕುಳಿತ್ತಿದ್ದ ಹೆಚ್ ಡಿ ರೇವಣ್ಣರನ್ನು ನೋಡಿದ ಬೆಂಗಾವಲು ಪಡೆ ಪೊಲೀಸರು ವಾಹನವನ್ನು ನಿಲ್ಲಿಸಿದರು. ಆಗ ರೇವಣ್ಣ ಅವರು ಕೇಂದ್ರ ಸಚಿವರ ಬಳಿ ಬಂದು ಹೂಗುಚ್ಚ ನೀಡಿ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದರು.

ನಂತರ ಹರದನಹಳ್ಳಿಯಿಂದ ಹಳೇಕೋಟೆಗೆ ಕಾರ್ಯಕ್ರಮಕ್ಕೆ ಆಗಮಿಸಿದ ಹರ್ದಿಪ್ ಸಿಂಗ್ ಪುರಿ ಬೆಂಗಾವಲು ವಾಹನದ ಪೊಲೀಸರ ಮೇಲೆ ಗರಂ ಆದರು. ಮಾರ್ಗಮಧ್ಯೆ ಏಕೆ ವಾಹನ ನಿಲ್ಲಿಸಿದಿರಿ? ಯಾರು ನಿಮಗೆ ವಾಹನ ನಿಲ್ಲಿಸಲು ಹೇಳಿದ್ದು? ನನ್ನ ಸಮಯ ವ್ಯರ್ಥ ಮಾಡಿದ್ದೀರಿ ಎಂದು ಆಕ್ರೋಶ ಹೊರಹಾಕಿದರಲ್ಲದೆ, ಕರ್ತವ್ಯದಲ್ಲಿದ್ದ ಪೊಲೀಸರ ಹೆಸರು ಬರೆದುಕೊಳ್ಳುವಂತೆ ಆಪ್ತಸಹಾಯಕನಿಗೆ ಸೂಚಿಸಿದರು.

ಇನ್ನು ಕಾರ್ಯಕ್ರಮದ ವೇಳೆ ಸಚಿವರ ಪಕ್ಕದಲ್ಲಿಯೇ ಕುಳಿತಿದ್ದ ಹೊಳೆನರಸೀಪುರ ಶಾಸಕರೂ ಆಗಿರುವ ಎಚ್‌ಡಿ ರೇವಣ್ಣ ಅವರು ವೇದಿಕೆಯಲ್ಲಿದ್ದ ಭದ್ರತಾ ಸಿಬ್ಬಂದಿಗೆ ಹರ್ದಿಪ್ ಸಿಂಗ್ ಪುರಿ ತರಾಟೆಗೆ ತೆಗೆದುಕೊಂಡಿದ್ದನ್ನು ಮೌನವಾಗಿ ನೋಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT