ಬಿ.ವೈ ವಿಜಯೇಂದ್ರ 
ರಾಜ್ಯ

ಅಯೋಧ್ಯೆ ರಾಮ ದೇವಾಲಯದ ಪ್ರಾಣಪ್ರತಿಷ್ಠಾಪನೆಗೆ ಕಾಂಗ್ರೆಸ್ ಗೈರು ಅಚ್ಚರಿಯೇನಲ್ಲ: ವಿಜಯೇಂದ್ರ

ಅಯೋಧ್ಯೆಯಲ್ಲಿ ರಾಮ ದೇವಾಲಯದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ಹಾಜರಾಗುತ್ತಿರುವುದರಲ್ಲಿ ಅಚ್ಚರಿಯೇನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ದೇವಾಲಯದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ಹಾಜರಾಗುತ್ತಿರುವುದರಲ್ಲಿ ಅಚ್ಚರಿಯೇನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. 

ಕಾಂಗ್ರೆಸ್ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಆರಂಭದಿಂದಲೂ ಕಾಂಗ್ರೆಸ್ ರಾಮ ಮಂದಿರದ ವಿರುದ್ಧವಿತ್ತು ಎಂದು ಆರೋಪಿಸಿದ್ದಾರೆ.
 
ರಾಮಮಂದಿರ ಉದ್ಘಾಟನೆಯ ವಿಷಯವನ್ನು ಕಾಂಗ್ರೆಸ್ ಹಾಗೂ ಆರ್ ಎಸ್ಎಸ್ ರಾಜಕೀಯ, ಚುನಾವಣೆಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮಂದಿರ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿದೆ.

1992 ರಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡಾಗ ಮರುದಿನವೇ ಬಿಜೆಪಿ ಆಡಳಿತವಿದ್ದ ರಾಜ್ಯ ಸರ್ಕಾರಗಳನ್ನು ಕಾಂಗ್ರೆಸ್ ಸರ್ಕಾರ ವಜಾಗೊಳಿಸಿತ್ತು. ಪ್ರತಿ ಬಾರಿಯೂ ಕಾಂಗ್ರೆಸ್ ಪಕ್ಷ ರಾಮ ಜನ್ಮಭೂಮಿ ಚಳುವಳಿಯ ವಿರುದ್ಧವೇ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಭಗವಾನ್ ರಾಮಚಂದ್ರನನ್ನು ಕಾಂಗ್ರೆಸ್ ಎಂದಿಗೂ ನಂಬುವುದಿಲ್ಲ ಎಂದು ಆರೋಪಿಸಿದ ವಿಜಯೇಂದ್ರ, ಜನವರಿ 22 ರಂದು ಕರ್ನಾಟಕ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ತಾವು ಅಧಿಕಾರಕ್ಕೆ ಬರುವುದಿಲ್ಲ ಎಂಬುದನ್ನು ಮನಗಂಡಿರುವ ಕಾಂಗ್ರೆಸ್ ಮತ್ತು INDIA ಬಣ ಸಂಪೂರ್ಣ ಅಸಮಾಧಾನಗೊಂಡಿವೆ ಎಂದು ವಿಜಯೇಂದ್ರ ಹೇಳಿದ್ದಾರೆ.

"ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಇತಿಹಾಸವನ್ನು ಸೃಷ್ಟಿಸಲಿದ್ದಾರೆ ಎಂಬುದನ್ನು ಅವರು ಅರಿತುಕೊಂಡಿದ್ದಾರೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT