ಸಕಾಲ ಸೇವೆ. 
ರಾಜ್ಯ

ಶೀಘ್ರದಲ್ಲೇ ಎಲ್ಲಾ ಸಕಾಲ ಸೇವೆಗಳ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಎಲ್ಲಾ ಸಕಾಲ ಸೇವೆಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಸಕಾಲ ಸೇವೆಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.

ಬುಧವಾರ ಸಕಾಲ ಸೇವೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಕಂದಾಯ ಇಲಾಖೆಯಲ್ಲಿ ಬಹುತೇಕ ಸೇವೆಗಳನ್ನು ಆನ್‌ಲೈನ್‌ ರೂಪದಲ್ಲಿ ಒದಗಿಸಲಾಗುತ್ತಿದೆ. ಆ ಮಾದರಿಯನ್ನು ಸಕಾಲ ಸೇವೆಗಳಲ್ಲಿ ಏಕೆ ಅನುಷ್ಠಾನಕ್ಕೆ ತರಬಾರದು? ಸಕಾಲ ಅರ್ಜಿಗಳನ್ನೂ ಆನ್‌ಲೈನ್‌ ಮೂಲಕ ಸ್ವೀಕರಿಸುವ ಪ್ರಕ್ರಿಯೆ ಆರಂಭಿಸಬೇಕು’ ಎಂದು ನಿರ್ದೇಶನ ನೀಡಿದರು.

ಸರ್ಕಾರ ಜನರ ತಲುಪಲು ಸಕಾಲ ಉತ್ತಮ ಮಾರ್ಗವಾಗಿದೆ. ಹೀಗಾಗಿ ಯಾವುದೇ ವಿಳಂಬವಿಲ್ಲದೆ ಸೇವೆಗಳನ್ನು ಡಿಜಿಟಲೀಕರಣಗೊಳಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಕಾಲ ಸೇವೆಗಳು ಡಿಜಿಟಲೀಕರಣಗೊಂಡರೆ ಜನರು ತಮ್ಮ ಸ್ಮಾರ್ಟ್‌ಫೋನ್‌ಗಳಿಂದ ಸಕಾಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಎಂದು ಹೇಳಿದರು.

ಮುಖ್ಯಮಂತ್ರಿಗಳ ಇತ್ತೀಚಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಸಕಾಲ ಸೇವೆ ವಿಳಂಬವಾಗುತ್ತಿರುವ ಬಗ್ಗೆ ಹಲವರು ದೂರು ನೀಡಿದ್ದಾರೆ. ಸಕಾಲ ಸೇವೆಗಳು ನಿಗದಿತ ಸಮಯದಲ್ಲಿ ಜನರಿಗೆ ತಲುಪುವಂತೆ ಮಾಡಬೇಕು. ‘ಪ್ರತಿ ಹಳ್ಳಿಯಲ್ಲೂ ಈಗ ಸೈಬರ್ ಕೇಂದ್ರಗಳಿವೆ. ಗ್ರಾಮ-ಒನ್‌ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ಮತ್ತು ಮೊಬೈಲ್‌ ಮೂಲಕವೂ ಸೇವೆ ಒದಗಿಸುವ ಉದ್ದೇಶವಿದೆ. ಜನರು ಮೊಬೈಲ್ ಮೂಲಕವೇ ಸಕಾಲ ಅರ್ಜಿ ಸಲ್ಲಿಸಿ ಸೇವೆಯನ್ನೂ ಪಡೆಯಬಹುದು. ಸಕಾಲ ಸೇವೆ ಡಿಜಿಟಲೀಕರಣಗೊಂಡರೆ ಡಿಜಿಟಲ್ ಹೆಜ್ಜೆ ಗುರುತಿನ ಮೂಲಕ ಅರ್ಜಿ ಎಲ್ಲಿದೆ? ವಿಳಂಬಕ್ಕೆ ಕಾರಣವೇನು? ಎಂಬ ಕುರಿತ ಮಾಹಿತಿ ನಮಗೂ ಲಭ್ಯವಾಗುತ್ತದೆ. ಹೀಗಾಗಿ ಮುಂದಿನ 5 ವರ್ಷದಲ್ಲಿ ಸಕಾಲ ಸಂಪೂರ್ಣ ಡಿಜಿಟಲಿಕರಣ ಆಗಬೇಕು’ ಎಂದು ಸೂಚಿಸಿದರು.

500 ಕ್ಕೂ ಹೆಚ್ಚು ಹೊಸ ಸೇವೆಗಳನ್ನು ಶೀಘ್ರದಲ್ಲೇ ಸಕಾಲದ ಅಡಿಯಲ್ಲಿ ಸೇರಿಸುವ ಕುರಿತು ಚಿಂತನೆಗಳು ನಡೆಯುತ್ತಿವೆ. ಈಗಾಗಲೇ ಹಲವು ಇಲಾಖೆಗಳು ಸರ್ಕಾರವನ್ನು ಸಂಪರ್ಕಿಸಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT