ಸಕಾಲ ಸೇವೆ. 
ರಾಜ್ಯ

ಶೀಘ್ರದಲ್ಲೇ ಎಲ್ಲಾ ಸಕಾಲ ಸೇವೆಗಳ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಎಲ್ಲಾ ಸಕಾಲ ಸೇವೆಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಸಕಾಲ ಸೇವೆಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.

ಬುಧವಾರ ಸಕಾಲ ಸೇವೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಕಂದಾಯ ಇಲಾಖೆಯಲ್ಲಿ ಬಹುತೇಕ ಸೇವೆಗಳನ್ನು ಆನ್‌ಲೈನ್‌ ರೂಪದಲ್ಲಿ ಒದಗಿಸಲಾಗುತ್ತಿದೆ. ಆ ಮಾದರಿಯನ್ನು ಸಕಾಲ ಸೇವೆಗಳಲ್ಲಿ ಏಕೆ ಅನುಷ್ಠಾನಕ್ಕೆ ತರಬಾರದು? ಸಕಾಲ ಅರ್ಜಿಗಳನ್ನೂ ಆನ್‌ಲೈನ್‌ ಮೂಲಕ ಸ್ವೀಕರಿಸುವ ಪ್ರಕ್ರಿಯೆ ಆರಂಭಿಸಬೇಕು’ ಎಂದು ನಿರ್ದೇಶನ ನೀಡಿದರು.

ಸರ್ಕಾರ ಜನರ ತಲುಪಲು ಸಕಾಲ ಉತ್ತಮ ಮಾರ್ಗವಾಗಿದೆ. ಹೀಗಾಗಿ ಯಾವುದೇ ವಿಳಂಬವಿಲ್ಲದೆ ಸೇವೆಗಳನ್ನು ಡಿಜಿಟಲೀಕರಣಗೊಳಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಕಾಲ ಸೇವೆಗಳು ಡಿಜಿಟಲೀಕರಣಗೊಂಡರೆ ಜನರು ತಮ್ಮ ಸ್ಮಾರ್ಟ್‌ಫೋನ್‌ಗಳಿಂದ ಸಕಾಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಎಂದು ಹೇಳಿದರು.

ಮುಖ್ಯಮಂತ್ರಿಗಳ ಇತ್ತೀಚಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಸಕಾಲ ಸೇವೆ ವಿಳಂಬವಾಗುತ್ತಿರುವ ಬಗ್ಗೆ ಹಲವರು ದೂರು ನೀಡಿದ್ದಾರೆ. ಸಕಾಲ ಸೇವೆಗಳು ನಿಗದಿತ ಸಮಯದಲ್ಲಿ ಜನರಿಗೆ ತಲುಪುವಂತೆ ಮಾಡಬೇಕು. ‘ಪ್ರತಿ ಹಳ್ಳಿಯಲ್ಲೂ ಈಗ ಸೈಬರ್ ಕೇಂದ್ರಗಳಿವೆ. ಗ್ರಾಮ-ಒನ್‌ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ಮತ್ತು ಮೊಬೈಲ್‌ ಮೂಲಕವೂ ಸೇವೆ ಒದಗಿಸುವ ಉದ್ದೇಶವಿದೆ. ಜನರು ಮೊಬೈಲ್ ಮೂಲಕವೇ ಸಕಾಲ ಅರ್ಜಿ ಸಲ್ಲಿಸಿ ಸೇವೆಯನ್ನೂ ಪಡೆಯಬಹುದು. ಸಕಾಲ ಸೇವೆ ಡಿಜಿಟಲೀಕರಣಗೊಂಡರೆ ಡಿಜಿಟಲ್ ಹೆಜ್ಜೆ ಗುರುತಿನ ಮೂಲಕ ಅರ್ಜಿ ಎಲ್ಲಿದೆ? ವಿಳಂಬಕ್ಕೆ ಕಾರಣವೇನು? ಎಂಬ ಕುರಿತ ಮಾಹಿತಿ ನಮಗೂ ಲಭ್ಯವಾಗುತ್ತದೆ. ಹೀಗಾಗಿ ಮುಂದಿನ 5 ವರ್ಷದಲ್ಲಿ ಸಕಾಲ ಸಂಪೂರ್ಣ ಡಿಜಿಟಲಿಕರಣ ಆಗಬೇಕು’ ಎಂದು ಸೂಚಿಸಿದರು.

500 ಕ್ಕೂ ಹೆಚ್ಚು ಹೊಸ ಸೇವೆಗಳನ್ನು ಶೀಘ್ರದಲ್ಲೇ ಸಕಾಲದ ಅಡಿಯಲ್ಲಿ ಸೇರಿಸುವ ಕುರಿತು ಚಿಂತನೆಗಳು ನಡೆಯುತ್ತಿವೆ. ಈಗಾಗಲೇ ಹಲವು ಇಲಾಖೆಗಳು ಸರ್ಕಾರವನ್ನು ಸಂಪರ್ಕಿಸಿವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT